ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಸರ್ವ ಕಷ್ಟ ಪರಿಹಾರಾರ್ಥಾ ಅಂಗಾರಕ ಸಂಕಷ್ಟ ಹರ ಚತುರ್ಥಿ ವ್ರತ ಮತ್ತು ಪೂಜಾ ವಿಧಾನ ತಿಳಿಯಿರಿ…!!

admin by admin
July 26, 2021
in Astrology, Newsbeat, ಜ್ಯೋತಿಷ್ಯ
lord ganesha saakshatv
Share on FacebookShare on TwitterShare on WhatsappShare on Telegram

ಸರ್ವ ಕಷ್ಟ ಪರಿಹಾರಾರ್ಥಾ ಅಂಗಾರಕ ಸಂಕಷ್ಟ ಹರ ಚತುರ್ಥಿ ವ್ರತ ಮತ್ತು ಪೂಜಾ ವಿಧಾನ ತಿಳಿಯಿರಿ…!!

lord ganesha saakshatvಅಂಗಾರಕ ಸಂಕಟಹರ ಚತುರ್ಥಿ…  ನಾಳೆ  ಚತುರ್ಥಿ ತಿಥಿಯಂದು ಆಚರಿಸುವ ವ್ರತಗಳಲ್ಲಿ ಸಂಕಷ್ಟಹರ ಚತುರ್ಥಿಯೂ ಒಂದು.
ಹೆಸರೇ ಹೇಳುವಂತೆ ಕಷ್ಟದಿಂದ ಪಾರಾಗಲು ಈ ವ್ರತವನ್ನು ಆಚರಿಸುವರು. ಚತುರ್ಥಿಯು ಒಂದು ತಿಂಗಳಲ್ಲಿ ಎರಡು ಬಾರಿ ಬರುತ್ತದೆ. ಅವುಗಳಲ್ಲಿ ಕೃಷ್ಣಪಕ್ಷದ ಚತುರ್ಥಿಯಂದೇ ಸಂಕಷ್ಟಿಯನ್ನು ಆಚರಿಸುತ್ತಾರೆ.

Related posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

March 17, 2026
ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

March 17, 2026

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್
ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ, ಅಂಜನ ಶಾಸ್ತ್ರ, ದೈವಪ್ರಶ್ನೆ ,ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ 85489 98564

ಅಂದು ಮಂಗಳವಾರವಾದರೆ ‘ಅಂಗಾರಕ ಚತುರ್ಥಿ’ ಎನ್ನುತ್ತಾರೆ. ಅಂಗಾರಕ ಚತುರ್ಥಿಗೆ ಹೆಚ್ಚಿನ ಮಹತ್ತ್ವವಿದೆ. ಸಂಕಷ್ಟಿಯನ್ನು ಆಚರಿಸುವವರು ಕೃಷ್ಣ ಪಕ್ಷದ ಚತುರ್ಥಿಯಂದು ಹಗಲು ಉಪವಾಸ ಮಾಡುತ್ತಾರೆ.  ಸಂಜೆ ವ್ರತ ಪೂಜಾವನ್ನು ಆಚರಿಸಿ, ಚಂದ್ರದರ್ಶನ ಮಾಡುವುದರೊಂದಿಗೆ ಉಪವಾಸ ಕೊನೆಗೊಳ್ಳುತ್ತದೆ.  ಒಂದು ವರ್ಷದಲ್ಲಿ ಅಧಿಕ ಮಾಸವಿಲ್ಲದಿದ್ದಾಗ ಚೈತ್ರಮಾಸದಿಂದ ಹನ್ನೆರಡು ಕೃಷ್ಣಪಕ್ಷಗಳಿರುತ್ತವೆ. ಹಾಗಾಗಿ ಸಂಕಷ್ಟಿಯ ಸಂಖ್ಯೆಯೂ ಹನ್ನೆರಡು. ಅಧಿಕ ಮಾಸವಿದ್ದಾಗ ಈ ಸಂಖ್ಯೆ ಹದಿಮೂರಕ್ಕೇರುತ್ತದೆ.

ಪೂಜಾ ವಿಧಾನ
ಈ ದಿನ ಬೆಳಿಗ್ಗೆ ಎಳ್ಳನ್ನು ಅರೆದು ನೆಲ್ಲಿಯ ಹಿಟ್ಟಿನೊಂದಿಗೆ ಹಾಲು ಅಥವಾ ಎಣ್ಣೆಯಲ್ಲಿ ಬೆರೆಸಿ ತಲೆಗೆ ಹಚ್ಚಿ ಮಂಗಳಸ್ನಾನ ಮಾಡಬೇಕು.
ಸ್ನಾನವಾದ ಮೇಲೆ ಸಂಕಷ್ಟಹರ ಗಣಪತಿ ವ್ರತದ ಸಂಕಲ್ಪ ಮಾಡಬೇಕು. ಈ ದಿನ ಹಗಲು ಪೂರ್ತಿ ಉಪವಾಸ ಇರಬೇಕು. ಅದು ಅಸಾಧ್ಯವಾದರೆ
ಹಾಲು, ಹಣ್ಣು ಸೇವಿಸಬಹುದು.

ಪೂಜೆಯ ಮಾಡುವ ಸ್ಥಳವನ್ನು ಗೋಮಯದಿಂದ ಶುದ್ಧಗೊಳಿಸಿ, ಅಷ್ಟದಳ ಗಣಪತಿಯ ಮಂಡಲವನ್ನು ಬಿಳಿಯ ಮಣ್ಣಿನಿಂದ ಬರೆಯಬೇಕು.
ಅರಿಸಿನ ಕುಂಕುಮಗಳಿಂದ ಮಂಡಲವನ್ನು ಅಲಂಕರಿಸಬೇಕು ಇದರ ಮೇಲೆ ಕಲಶವನ್ನು ಸ್ಥಾಪಿಸುವುದಕ್ಕಾಗಿ ಎರಡು ಅಗ್ರವಿರುವ ಬಾಳೆಯ ಎಲೇ ಮೇಲೆ ಅಕ್ಕಿಯನ್ನು ಹರಡಬೇಕು.

ಅದರ ಮೇಲೆ ಮೃತ್ತಿಕೆ ನಾಣ್ಯ ಮತ್ತು ನೀರು ಹಾಕಿದ ಕಲಶವನ್ನಿಟ್ಟು, ಅದರ ಮೇಲೆ ಮಾವಿನ ಚಿಗುರು ತೆಂಗಿನಕಾಯಿ ನಾಣ್ಯ ಪವಿತ್ರ ಉಪವೀತಗಳನ್ನು ಇಟ್ಟು, ಎದುರಲ್ಲಿ ವೀಳ್ಯದ ಎಲೆ ಅಡಿಕೆ ಬಾಳೆಹಣ್ಣು ಇಡಬೇಕು. ಈ ಕಲಶಕ್ಕೆ ಪೂಜೆ ಮಾಡಿ ಗಣಪತಿಯನ್ನು ಆವಾಹನೆ ಮಾಡಿ, ಷೋಡಶೋಪಚಾರ ಪೂಜೆ ಮಾಡಬೇಕು.

ಆವಾಹನೆ, ಆಸನ, ಪಾದ್ಯ, ಅರ್ಘ್ಯ ,ಆಚಮನ, ಮಧುಪರ್ಕ,ಪುನರಾಚಮನ,ಪಂಚಾಮೃತ, ಶುದ್ಧೋದಕ ಸ್ನಾನ, ವಸ್ತ್ರ ಉಪವೀತ, ಆಭರಣ ಗಂಧ, ಅಕ್ಷತೆ, ಹೂ ಮುಂತಾದ ಉಪಚಾರಗಳಾದ ಮೇಲೆ ದೂರ್ವೆಗಳಿಂದ (ಎಂದರೆ ಗರಿಕೆಯಿಂದ) ಅಷ್ಟೋತ್ತರ ಶತ ನಾಮಾವಳಿ ಅಥವಾ ಗಕಾರ ಸಹಸ್ರನಾಮ ಪೂಜೆ ಮಾಡಬೇಕು.

ಅಂಗಾರಕ ವ್ರತದ ಕಥೆಯನ್ನು ಓದಬೇಕು
ಕಥೆಯು ಹೀಗಿದೆ.
ಕಥಾಶ್ರವಣ

ಸುಲಭನೆಂಬ ಕ್ಷತ್ರಿಯನು ಸಮುದ್ರೆಯೆಂಬ ಪತ್ನಿಯೊಂದಿಗೆ ಪುರಾಣವನ್ನು ಕೇಳುತ್ತಿದ್ದಾಗ ಮಧುಸೂದನ ಎಂಬವನು ಅಲ್ಲಿಗೆ ಬಂದನು.

ಅವನನ್ನು ನೋಡಿ ಸುಲಭನು ನಗೆಯಾಡಲು, ಸಿಟ್ಟಿಗೆದ್ದ ಮಧುಸೂದನನು ಎತ್ತಾಗುವಂತೆ ಸುಲಭನನ್ನು ಶಪಿಸಿದನು. ಇದರಿಂದ ಕೋಪಗೊಂಡ ಸುಲಭೆಯು ಮಧುಸೂದನನು ಕತ್ತೆಯಾಗುವಂತೆ ಶಪಿಸಿದಳು. ಇದರಿಂದ ಇನ್ನೂ ಕೋಪಗೊಂಡ ಮಧುಸೂದನನು ಆಕೆಗೆ ಪತಿತಳಾಗುವಂತೆ ಶಪಿಸಿದನು.

ಹೀಗೆ ಮೂವರೂ ಶೋಚನೀಯ ಸ್ಥಿತಿಗೆ ತಲುಪಿ ಸಂಚರಿಸುತ್ತಿರುವಾಗ ದೇವಾಲಯವೊಂದರಲ್ಲಿ ಸಂಕಷ್ಟಹರ ಗಣಪತಿಯ ಪೂಜೆ ನಡೆಯುತ್ತಿದ್ದುದನ್ನು ನೋಡಿದರು. ಈ ಶಾಪಗ್ರಸ್ತರಿಗೆ ಅಲ್ಲಿ ಸ್ಥಳವು ದೊರೆಯದಿದ್ದರೂ ಪರಲೋಕದಲ್ಲಿ ಸುಸ್ವಾಗತವು ದೊರೆಯಿತು. ಕೌಂಡಿನ್ಯ ಆಶ್ರಯೆ ಎಂಬ ದಂಪತಿಗಳು ದೂರ್ವೆಯ ಮಹಿಮೆಯನ್ನು ಚರ್ಚಿಸುತ್ತಾರೆ. ಯಮಲೋಕದ ಉತ್ಸವವೊಂದರಲ್ಲಿ ಯಮನು ತಿಲೋತ್ತಮೆಯ ನರ್ತನದಿಂದ ಆಕರ್ಷಿತನಾದನು. ಕೂಡಲೇ ಅಲ್ಲಿಂದ ಹೊರಟರೂ ಯಮನ ತೇಜಸ್ಸಿನಿಂದ ಜ್ವಾಲಾಮಾಲಿಯೆಂಬ ಅಯೋನಿಜನು ಜನಿಸಿದನು.

ಲೋಕಕಂಟಕನಾದ ಅವನನ್ನು ಕೊಲ್ಲಲು ಗಣಪತಿಯೇ ಬರಬೇಕಾಯಿತು. ಅನಲಾಸುರನನ್ನೂ ಆಗ ಸಂಹರಿಸಿದ ಗಣೇಶನಿಗೆ ಚಂದ್ರ ಸಿದ್ಧಿ ಬುದ್ಧಿ ತಾವರೆ ಶೇಷ ಮುಂತಾದವು ಕೊಡುಗೆಯಾಗಿ ದೊರೆತವು. ಆದರೆ ಅವನಿಗೆ ಮನಃಶಾಂತಿ ದೊರೆಯದೆ, ದೂರ್ವಾರ್ಚನೆ ಮಾಡಿದ ಮೇಲೆಯೇ ಮನಸ್ಸಿಗೆ ಶಾಂತಿ ದೊರೆಯಿತು.

ಮಿಥಿಲೆಯ ರಾಜನಾದ ಜನಕನು ಅಪರಿಮಿತವಾಗಿ ಅನ್ನದಾನ ಮಾಡುತ್ತಿದ್ದರೂ ಅವನ ಸಂಪತ್ತು ಹಾಗೆಯೇ ಇದ್ದಿತು. ಇದರಿಂದ ಗರ್ವಿತನಾದ ರಾಜನನ್ನು ಸಾತ್ವಿಕನನ್ನಾಗಿಸಲು ಗಣಪತಿಯು ಕುಷ್ಠರೋಗಿಯಾಗಿ ಬಂದು ಭೋಜನಶಾಲೆಯಲ್ಲಿ ಉಂಡು ಅನ್ನವಿಲ್ಲದಂತೆ ಮಾಡಿದನು. ಬಡದಂಪತಿಗಳ ದೂರ್ವೆಯೊಂದರಿಂದ ತೃಪ್ತನಾಗಿ ಅವರಿಗೆ ವರದಾನ ಮಾಡಿದ್ದನ್ನು ನೋಡಿದ ಮೇಲೆ ರಾಜನಿಗೆ ಜ್ಞಾನೋದಯವಾಯಿತು.

ಆಶ್ರಯೆಯು ನಾರದರ ಸೂಚನೆಯಂತೆ ದೂರ್ವಾದಳದ ಭಾರಕ್ಕೆ ಸರಿಯಾದ ಚಿನ್ನವನ್ನು ಯಾಚಿಸಲು ಇಂದ್ರ ಕುಬೇರ ವಿಷ್ಣು ಶಿವ ಮುಂತಾದ ಮಹಾಮಹಿಮರೆಲ್ಲರೂ ಅದನ್ನು ನೀಡುವಲ್ಲಿ ವಿಫಲರಾದರು.

ಕೃತವೀರ್ಯ ಶೂರಸೇನ ಸ್ಕಂದ ಪಾರ್ವತೀ ದಮಯಂತೀ ನಳ ಪ್ರದ್ಯುಮ್ನ ರುಕ್ಮಿಣೀ ಶ್ರೀಕೃಷ್ಣ ಮುಂತಾದವರು ಆಚರಿಸಿದ ಈ ವ್ರತ ಅಸಾಧಾರಣವಾದುದು.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಕಥಾಶ್ರವಣವಾದ ಮೇಲೆ

ಧೂಪ ದೀಪವಾದ ಮೇಲೆ ನೈವೇದ್ಯಕ್ಕೆ ಕರಿಗಡುಬು, ಮೋದಕ ಇಡಬೇಕು. ಮೈದಾ ಹಿಟ್ಟು, ರವೆಯನ್ನು ಕಲಸಿ ಕಣಕ ಮಾಡಿ, ಒಳಗೆ ಹೂರಣ ಸೇರಿಸಿ ಎಣ್ಣೆಯಲ್ಲಿ ಕರಿಯುತ್ತಾರೆ.

ಹೂರಣವನ್ನು ಎರಡು ತರಹ ಮಾಡುತ್ತಾರೆ. ಕೊಬ್ಬರಿ ತುರಿ, ಸಕ್ಕರೆ, ಏಲಕ್ಕಿ ಅಥವಾ ಬೆಲ್ಲ, ಕಾಯಿ ತುರಿ, ಏಲಕ್ಕಿ. ಈ ದಿನ ಕಡುಬು ಮಾಡುವಾಗ ಹೂರಣಕ್ಕೆ ಎಳ್ಳನ್ನು ಸೇರಿಸಬೇಕು.

ನೈವೇದ್ಯಕ್ಕೆ ಕನಿಷ್ಠ ಇಪ್ಪತ್ತೊಂದು ಕರಿಗಡಬು ಮತ್ತು ಮೋದಕಗಳನ್ನು ಮಾಡಿಕೊಳ್ಳಬೇಕು. ಪೂಜೆಯ ನಂತರ ಕಡಬು, ಮೋದಕ ದಾನ ಮಾಡಿ, ಉಳಿದ ಕಡಬು, ಮೋದಕಗಳನ್ನು ಪ್ರಸಾದವಾಗಿ ಸ್ವೀಕರಿಸಬೇಕು.

ಎಷ್ಟು ಬೇಕೋ ಅಷ್ಟು ಕರಿಗಡುಬು, ಮೋದಕ ಮಾಡಿಕೊಳ್ಳಬಹುದು. ನೈವೇದ್ಯವಾದ ಮೇಲೆ ಫಲ ಸಮರ್ಪಣ, ದೂರ್ವಾಪೂಜೆ, ಮಂಗಳಾರತಿ, ಮಂತ್ರಪುಷ್ಪ, ಪ್ರದಕ್ಷಿಣ, ನಮಸ್ಕಾರ, ಪ್ರಸನ್ನಾರ್ಘ್ಯ, ಪ್ರಾರ್ಥನೆ ಮಾಡಿ ಪೂಜಾ ಸಮಾಪ್ತಿ ಮಾಡಬೇಕು. ವಾಯನದಾನ, ತೀರ್ಥಪ್ರೋಕ್ಷಣ, ಕಲಶದಾನಗಳಿಂದ ಪೂಜೆ ಸಾಂಗವಾಗಿ ಮುಕ್ತಾಯಗೊಳ್ಳುವುದು.
ಶ್ರೀಮಧ್ವೇಶಾರ್ಪಣಮಸ್ತು

Tags: #astrology#Hindu culture.#saakshatvbengaluruhoroscopekarnatakalord ganeshaPandit Jnaneshwar Rao
ShareTweetSendShare
Join us on:

Related Posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

by admin
March 17, 2026
0

ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ ಪಠನೆ ಮಾಡುವುದರಿಂದ ಯಾವ ರೀತಿಯ ಫಲಗಳು ದೊರೆಯುತ್ತವೆ ಹಾಗೆಯೇ ಕನಕಧಾರಾ ಸ್ತೋತ್ರವನ್ನು ಪಠಿಸುವಾಗ ಯಾವ ನಿಯಮಗಳನ್ನು ಮುಖ್ಯವಾಗಿ ಅನುಸರಿಸಬೇಕು ಎಂಬುವುದರ...

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

by Shwetha
March 17, 2026
0

ಮಾರ್ಚ್ 17 ಕರುನಾಡಿಗೆ ಕೇವಲ ಒಂದು ದಿನಾಂಕವಲ್ಲ, ಅದೊಂದು ಹಬ್ಬ. ಕನ್ನಡ ಚಿತ್ರರಂಗದ ಹೆಮ್ಮೆಯ ಪುತ್ರ, ಕರುನಾಡಿನ ಅಚ್ಚುಮೆಚ್ಚಿನ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ...

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

by Shwetha
March 17, 2026
0

ರಾಜಧಾನಿ ಬೆಂಗಳೂರಿನಲ್ಲಿ ಸ್ವಂತದ್ದೊಂದು ಸಣ್ಣ ಮನೆ ಕಟ್ಟಿಕೊಂಡು ನೆಮ್ಮದಿಯಾಗಿ ಬದುಕಬೇಕು ಎಂದು ಕನಸು ಕಾಣುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ರಾಜ್ಯ ಸರ್ಕಾರವು ಬಹುದೊಡ್ಡ ರಿಲೀಫ್...

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

by Shwetha
March 17, 2026
0

ಇರಾನ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಯುದ್ಧದ ಪರಿಣಾಮ ಕರ್ನಾಟಕದ ಆರ್ಥಿಕತೆಯ ಮೇಲೂ ಪ್ರಭಾವ ಬೀರಲು ಆರಂಭಿಸಿದೆ. ಯುದ್ಧದ ಪರಿಣಾಮವಾಗಿ ದೇಶಾದ್ಯಂತ...

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

by Shwetha
March 17, 2026
0

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಮ್ಮ ಮೆಟ್ರೋ ವಿಸ್ತರಣೆಯ ಭಾಗವಾಗಿ ಪಿಂಕ್ ಲೈನ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆಗಳನ್ನು ವೇಗಗೊಳಿಸಿದೆ. ಮೇ ತಿಂಗಳಲ್ಲಿ ಪಿಂಕ್ ಲೈನ್ ಮೆಟ್ರೋ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram