ಅಸ್ಸಾಂ ಗಡಿ ಹಿಂಸಾಚಾರ : 5 ಪೊಲೀಸರು, ಓರ್ವ ನಾಗರೀಕ ಸಾವು – ರಾಜ್ಯಾದ್ಯಂತ 3 ದಿನ ಶೋಕಾಚರಣೆ
ಅಸ್ಸಾಂ : ಅಸ್ಸಾಂ ಮತ್ತು ಮಿಜೋರಾಂ ಗಡಿಯಲ್ಲಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಗಲಭೆಯಲ್ಲಿ 5 ಪೊಲೀಸರು, ಓರ್ವ ನಾಗರೀಕ ಮೃತಪಟ್ಟಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ.. ಈ ನಡುವೆ ಪೊಲೀಸರು, ನಾಗರೀಕರ ಸಾವಿಗೆ ಸಂತಾಪ ಸೂಚಿಸಿರುವ ಅಸ್ಸಾಂ ಸಿಎಂ ರಾಜ್ಯದಾದ್ಯಂತ 3 ದಿನಗಳ ಶೋಕಾಚರಣೆ ಘೋಷಣೆ ಮಾಡಿದ್ದಾರೆ.
ಅಸ್ಸಾಂ ಸರ್ಕಾರ 3 ದಿನಗಳ ಶೋಕಾಚರಣೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ, ಈ ಅವಧಿಯಲ್ಲಿ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ನಿಯಮಿತವಾಗಿ ಹಾರಿಸಲಾಗುವ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಎಂದು ತಿಳಿಸಲಾಗಿದೆ. ಅಸ್ಸಾಂ ಮತ್ತು ಮಿಜೋರಾಂ ನಡುವಣ ಗಡಿ ಸಂಘರ್ಷದ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಅಸ್ಸಾಂನ ಆರು ಮಂದಿ ಪೊಲೀಸರು ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 60ಕ್ಕಿಂತಲೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಗೃಹ ಸಚಿವ ಅಮಿತ್ ಶಾ ಅವರು ಅಸ್ಸಾಂ , ಮಿಜೋರಾಮ್ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿದ್ದು, ಶಾಂತಿ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.
ಈ ನಡುವೆ ಹಿಂಸಾಚಾರದಲ್ಲಿ ಮೃತಪಟ್ಟ ಐವರು ಪೊಲೀಸರಿಗೆ ಅಸ್ಸಾಂನ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮಾ ಅವರು ಗೌರವ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರವ ಅವರು, ಹಿಂಸಾಚಾರದಲ್ಲಿ ಪೊಲೀಸರು ಜೀವ ಕಳೆದುಕೊಂಡಿರುವುದು ಬಹಳಷ್ಟು ನೋವು ತಂದಿದೆ. ಸಿಲ್ಚಾರ್’ಗೆ ಭೇಟಿ ನೀಡಿ ಹುತಾತ್ಮರಾದ ಐವರು ಪೊಲೀಸರಿಗೆ ಗೌರವ ಸಲ್ಲಿಸಿದೆ ಎಂದು ತಿಳಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಾರಾಂತ್ಯದಲ್ಲಿ ಈ ಪ್ರದೇಶಕ್ಕೆ ಎರಡು ದಿನಗಳ ಭೇಟಿ ನೀಡಿ ಮೇಘಾಲಯದಿಂದ ಹಿಂದಿರುಗಿದ ನಂತರ ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದರು. ಇದಾದ ನಂತರ ಉಭಯ ರಾಜ್ಯಗಳ ನಡುವೆ ಘರ್ಷಣೆ ನಡೆದಿತು.
ಆ ಸಭೆಯಲ್ಲಿ ಮಿಜೋರಾಂ ಮುಖ್ಯಮಂತ್ರಿ ಜೊರಾಮ್ತಂಗಾ ಈಶಾನ್ಯದಲ್ಲಿ ಗಡಿ ವಿವಾದಗಳು ವಸಾಹತುಶಾಹಿ ಯುಗದ ಪರಂಪರೆಯಾಗಿದೆ ಮತ್ತು ಈ ಪ್ರದೇಶದ ಮತ್ತಷ್ಟು ಅಭಿವೃದ್ಧಿಗೆ ರಾಜ್ಯಗಳ ನಡುವೆ ಶಾಶ್ವತ ಶಾಂತಿ ಮುಖ್ಯವಾಗಿದೆ ಎಂದು ಹೇಳಿದ್ದಾರೆ. ಸಿಎಂ ಕರೆದ ಸಭೆಯಲ್ಲಿ ಅಸ್ಸಾಂನೊಂದಿಗಿನ ಗಡಿ ವಿವಾದದ ಕುರಿತು ಮಾತನಾಡಿದ ಜೊರಾಮ್ತಂಗಾ, ಪ್ರಸ್ತುತ ಪ್ರದೇಶವನ್ನು ಮಿಜೋರಾಂನ ಜನರು 100 ವರ್ಷಗಳಿಂದ ಬಳಸುತ್ತಿದ್ದಾರೆ. ನೆಲದ ಪರಿಸ್ಥಿತಿಯನ್ನು ಗೌರವಿಸಬೇಕು ಮತ್ತು ಶಾಂತಿಗೆ ಭಂಗ ತರದಂತೆ ಜೊರಾಮ್ತಂಗಾ ಅಸ್ಸಾಂ ಸರ್ಕಾರವನ್ನು ವಿನಂತಿಸಿದರು.
ಟ್ವಿಟರ್ನಲ್ಲಿ ಜೊರಾಮ್ತಂಗಾ ಹಂಚಿಕೊಂಡ ವಿಡಿಯೊ ತುಣುಕಿನಲ್ಲಿ ಕೋಲುಗಳಿಂದ ಶಸ್ತ್ರಸಜ್ಜಿತರಲ್ಲಿ ಘರ್ಷಣೆಯನ್ನು ತಡೆಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಅಸ್ಸಾಂ ಮತ್ತು ಮೇಘಾಲಯದ ನಡುವಿನ ಗಡಿ ವಿವಾದ ಹಲವು ವರ್ಷಗಳಿಂದ ಅಸ್ತಿತ್ವದಲ್ಲಿದೆ. ಎರಡು ದಿನಗಳ ಹಿಂದೆ ಶಿಲ್ಲಾಂಗ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ನಡುವಿನ ಸಭೆಯಲ್ಲಿಯೂ ಈ ವಿಷಯದ ಚರ್ಚೆ ನಡೆದಿತ್ತು. ಅಷ್ಟಾದರೂ, ಸೋಮವಾರ ಘರ್ಷಣೆ ನಡೆದಿದೆ.
https://twitter.com/i/status/1419573360346894338
https://twitter.com/i/status/1419589272324100100








