ಜೋರಾಗಿದೆ ಕೃಷ್ಣಾ ನದಿಯ ಅಬ್ಬರ : ರಾಯಚೂರಿನಲ್ಲಿ ಪ್ರವಾಹ ಆತಂಕ raichur saaksha tv
ರಾಯಚೂರು : ಭಾರಿ ಮಳೆ ಹಿನ್ನೆಲೆಯಲ್ಲಿ ನಾರಾಯಣಪುರ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗುತ್ತಿದೆ. ಇದರಿಂದಾಗಿ ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರು ಹೊರ ಹರಿಸಲಾಗುತ್ತಿದೆ.
ಇದರಿಂದಾಗಿ ಕೃಷ್ಣಾ ನದಿಯ ಅಬ್ಬರ ಜೋರಾಗಿದ್ದು, ಜಿಲ್ಲೆಯಲ್ಲಿ ಕ್ಷಣ ಕ್ಷಣಕ್ಕೂ ಪ್ರವಾಹದ ಆತಂಕ ಹೆಚ್ಚುತ್ತಲೇ ಇದೆ.
ಕೃಷ್ಣೆಯ ಅಬ್ಬರಿದಿಂದಾಗಿ ದೇವದುರ್ಗ ತಾಲೂಕಿನ ಗೂಗಲ್ ಗ್ರಾಮದ ಐತಿಹಾಸಿಕ ಅಲ್ಲಮಪ್ರಭು ದೇವಾಲಯ ಸಂಪೂರ್ಣ ಜಲಾವೃತವಾಗಿದೆ. ದೇವಾಲಯ ಬಳಿಯ ಹೋಟೆಲ್ ಗಳಿಗೆ ನೀರು ನುಗ್ಗಿ ವ್ಯಾಪಾರಿಗಳು ನಷ್ಟ ಅನುಭವಿಸಿದ್ದಾರೆ.
ಇನ್ನು ಪ್ರವಾಹದಿಂದ ಈಗಾಗಲೇ ಜಿಲ್ಲೆಯ ಶೀಲಹಳ್ಳಿ, ಹೂವಿನ ಹೆಡಗಿ ಹಾಗೂ ಗುರ್ಜಾಪೂರ ಸೇತುವೆ ಮುಳುಗಡೆಯಾಗಿವೆ.
ಕ್ಷಣದಿಂದ ಕ್ಷಣಕ್ಕೆ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿರುವುದರಿಂದ ನದಿ ಪಾತ್ರದ ಗ್ರಾಮಗಳಿಗೆ ನೀರು ನುಗ್ಗುತ್ತಿದೆ. ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ.