ಬೆಂಗಳೂರಿನಲ್ಲಿ ಲಸಿಕೆ ಕೊರತೆ : ಬಿಬಿಎಂಪಿ ಕಮಿಷನರ್ ಅಸಮಾಧಾನ
ಬೆಂಗಳೂರು : ನಗರದಲ್ಲಿ ಕೊರೊನಾ ಲಸಿಕೆ ಕೊರತೆ ಉಂಟಾಗಿದ್ದು, ಈ ಬಗ್ಗೆ ಬಿಬಿಎಂಪಿ ಕಮೀಷನರ್ ಅಸಮಾಧಾನ ಹೊರಹಾಕಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಡಿಕೆಗೆ ತಕ್ಕಂತೆ ವ್ಯಾಕ್ಸಿನ್ ಬಂದಿಲ್ಲ, ಜುಲೈ ನಲ್ಲಿ ವ್ಯಾಕ್ಸಿನ್ ಪೂರ್ಣ ಬೇಡಿಕೆಯಂತೆ ಸಿಕ್ಕಿಲ್ಲ, ಶೇ.17 ರಷ್ಟು ಜನರು ವ್ಯಾಕ್ಸಿನ್ ಪಡೆದಿದ್ದಾರೆ, ಪಾಲಿಕೆಗೆ ನಿತ್ಯ ಒಂದೂವರೆ ಲಕ್ಷ ವ್ಯಾಕ್ಸಿನ್ ಬೇಕಾಗಿದೆ, ಈ ಬಗ್ಗೆ ಆರೋಗ್ಯ ಇಲಾಖೆಗೆ ಬೇಡಿಕೆ ಇಡಲಾಗಿದೆ ಎಂದು ತಿಳಿಸಿದರು.
ಇನ್ನೂ ಈಗಲೂ ಎರಡನೇ ಅಲೆ ಮುಗಿದಿಲ್ಲ ಅಂತಾರೆ, ಮತ್ತೆ ಕೆಲವರು ಮೂರನೇ ಅಲೆ ಆರಂಭ ಅಂತಾರೆ. ಹೀಗಾಗಿ ತಜ್ಞರು ಅಲೆ ಬಗ್ಗೆ ಅಂತಿಮ ನಿರ್ಧಾರ ಮಾಡಲಿದ್ದಾರೆ.
ವ್ಯಾಕ್ಸಿನ್ ಪಡೆದವರಿಗೆ ರಿಸ್ಕ್ ಕಡಿಮೆ ಇದೆ. 45+ ವಯೋಮಾನದವರು ಅತಿ ಹೆಚ್ಚು ವ್ಯಾಕ್ಸಿನ್ ಪಡೆದಿದ್ದಾರೆ. ಎಲ್ಲರಿಗೂ ವ್ಯಾಕ್ಸಿನ್ ಕೊಡಲು ಮತ್ತಷ್ಟು ಬೇಡಿಕೆ ಇದೆ ಎಂದು ವಿವರಿಸಿದರು.
ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿಣಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.









