ಹಲವು ದಿನಗಳಿಂದ ಕಳಪೆ ಕೃಷಿ ಕೀಟನಾಶಕ ವಿರುದ್ಧ ಹೋರಾಟ ಮಾಡುತ್ತಿರುವ ರೈತಾಪಿ ವರ್ಗಕ್ಕೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಮಾರಾಟಗಾರರು ಇಲ್ಲವೆ ಕೀಟನಾಶಕ ಕಂಪನಿಗಳು ಕಳಪೆ ಗುಣಮಟ್ಟದ ಕೃಷಿ-ರಾಸಾಯನಿಕಗಳ ಮಾರಾಟ ಮಾಡಿದ್ದು ಕಂಡು ಬಂದರೆ ಜೈಲು ಗ್ಯಾರಂಟಿ ಎಂಬ ಆದೇಶ ಹೊರಡಿಸಲು ಸಿದ್ಧತೆ ನಡೆಸಿದೆ. ನಷ್ಟ ಉಂಟಾದರೆ ರೈತರಿಗೆ ಪರಿಹಾರ ನೀಡುವ ಮಸೂದೆಯನ್ನು ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಸರ್ಕಾರದ ಮೂಲಗಳಿಂದ ತಿಳಿದು ಬಂದಿದೆ. ಇದಲ್ಲದೆ ಕೀಟನಾಶಕ ಜಾಹೀರಾತುಗಳ ಮೇಲೆ ಕಣ್ಣಿಟ್ಟಿರುವ ಇಲಾಖೆ, ರೈತರ ದಿಕ್ಕು ತಪ್ಪಿಸಿ ಔಷಧಿ ಮಾರಾಟ ಮಾಡಿದ್ರೂ ಸಹ ಕಾನೂನಿನ ಏಟು ಬೀಳೋದು ಗ್ಯಾರಂಟಿ.
ಈ ಬಗ್ಗೆ ಮಾಹಿತಿ ನೀಡಿದ ಸಚಿವ ಜಾವಡೇಕರ್, ರೈತರ ಕೃಷಿಯ ಹಿತಾಸಕ್ತಿ ಕಾಪಾಡುವ ಸಲುವಾಗಿ ಈ ಮಸೂದೆ ಜಾರಿಗೆ ತರುತ್ತಿದ್ದು, ಷರತ್ತು, ನಿಯಮಗಳನ್ನು ಉಲ್ಲಂಘಿಸಿದರೆ ಕನಿಷ್ಠ 25 ಸಾವಿರದಿಂದ ಗರಿಷ್ಠ 50 ಲಕ್ಷ ರೂಪಾಯಿ ತನಕ ದಂಡವನ್ನೂ ಮತ್ತು ಗರಿಷ್ಠ 5 ವರ್ಷ ಜೈಲು ಶಿಕ್ಷೆಯನ್ನೂ ವಿಧಿಸುವ ಅಂಶವನ್ನು ಮಸೂದೆಯಲ್ಲಿ ಸೇರಿಸಲಾಗಿದೆ ಎಂದಿದ್ದಾರೆ.
ಎಲ್ಲಾ ಹೋಟೆಲ್ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು
ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...








