ಖಾತೆ ಕ್ಯಾತೆ : ಪ್ರತಿಕ್ರಿಯೆ ನೀಡದ ಬೊಮ್ಮಾಯಿ Basavaraja bommai
ಮೈಸೂರು : ಖಾತೆ ಹಂಚಿಕೆ ಬೆನ್ನಲ್ಲೆ ಕೆಲ ಸಚಿವರು ಅಸಮಾಧಾನಗೊಂಡಿದ್ದಾರೆ. ಖಾತೆ ಬದಲಿಸಿಕೊಡುವಂತೆ ಸಚಿವರು ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
ಮೈಸೂರು ಪ್ರವಾಸಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಮೈಸೂರು ಜಿಲ್ಲೆ ಪ್ರವಾಸ ಮಾಡುತ್ತಿದ್ದೇನೆ.
ಮೈಸೂರಿನ ಕೋವಿಡ್ ಪರಿಸ್ಥಿತಿ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ. ಎಲ್ಲಾ ಗಡಿ ಜಿಲ್ಲೆಗಳಿಗೆ ಹೋಗಲು ತೀರ್ಮಾನಿಸಿದ್ದೇನೆ.
ಕೋವಿಡ್ ಹೆಚ್ಚಾಗಿರುವ ಕಡೆ ಹೋಗಬೇಕೆಂದುಕೊಂಡಿದ್ದೇನೆ. ಚಾಮುಂಡೇಶ್ವರಿ, ಸುತ್ತೂರು ಮಠಕ್ಕೂ ಭೇಟಿ ಕೊಡುತ್ತೇನೆ ಎಂದು ಹೇಳಿದರು.
ಇನ್ನು ಖಾತೆ ಹಂಚಿಕೆಯಲ್ಲಿ ಸಚಿವರ ಅಸಮಾಧಾನ ವಿಚಾರವಾಗಿ ಕೇಳಿದ ಪ್ರಶ್ನಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡದೇ ಹೊರಟು ಹೋದರು.









