ಬೆಂಗ್ಳೂರಲ್ಲಿ ಕೊರೊನಾ ಹೆಚ್ಚಳ : ಮತ್ತೆ ಟಫ್ ರೂಲ್ಸ್, ಲಾಕ್ ಡೌನ್..?
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಯ ಆತಂಕ ಶುರುವಾಗಿದ್ದು, ಈಗಾಗಲೇ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಗಡಿ ಭಾಗದಲ್ಲಿ ವಾರಾಂತ್ಯ ಕಫ್ರ್ಯೂ ಹಾಗೂ ರಾಜ್ಯದಾದ್ಯಂತ ಕಟ್ಟು ನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇದೀಗ ಬೆಂಗಳೂರಿನಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗದೇ ಇರೋದು ಆತಂಕಕ್ಕೆ ಕಾರಣವಾಗಿದೆ.
ನಗರದಲ್ಲಿ ಕಳೆದ ಕೆಲ ದಿನಗಳಿಂದ 400 ಕ್ಕೂ ಹೆಚ್ಚು ಕೊರೊನಾ ಕೇಸ್ ಗಳು ಪತ್ತೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಕಂದಾಯ ಸಚಿವ ಆರ್ ಅಶೋಕ್ ನೇತೃತ್ವದಲ್ಲಿ ಮಹತ್ವದ ಸಭೆ ಕೂಡ ನಡೆಸಲಾಗುತ್ತಿದೆ.
ಈ ಸಭೆಯಲ್ಲಿ ಬಿಬಿಎಂಪಿ ವಿಶೇಷ ಆಯುಕ್ತ ಗೌರವ್ ಗುಪ್ತ, ಬೆಂಗಳೂರು ನಗರ ಪೊಲೀಸ್ ಕಮೀಷನರ್ ಕಮಲ್ ಸೇರಿದಂತೆ ವಿವಿಧ ಅಧಿಕಾರಿಗಳು ಭಾಗವಹಿಸಿದ್ದಾರೆ. ಈ ಸಭೆಯಲ್ಲಿ ಬೆಂಗಳೂರಿನಲ್ಲಿ ಸೋಂಕು ನಿಯಂತ್ರಣ ಕ್ರಮವಾಗಿ ಮತ್ತೆ ಲಾಕ್ ಡೌನ್ ಅಥವಾ ರಾತ್ರಿ ಕಪ್ರ್ಯೂ ಜೊತೆಗೆ, ವಾರಾಂತ್ಯ ಕಪ್ರ್ಯೂ ಜಾರಿಗೊಳಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.









