ಹುಣಸೆ ಬೀಜ ನುಂಗಿದ ಪರಿಣಾಮ 10 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಬಿಹಾರದ ಮುಜಾಫರ್ಪುರ ಜಿಲ್ಲೆಯ ಸಕ್ರಾದ ಮಚ್ಚಿ ಗ್ರಾಮದಲ್ಲಿ ನಡೆದಿದ್ದು, 10 ವರ್ಷದ ಆದರ್ಶ್ ಹುಣಸೆಹಣ್ಣು ತಿಂದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಆದರ್ಶ್ ಮೂರನೇ ತರಗತಿಯಲ್ಲಿ ಓದುತ್ತಿದ್ದ ಎನ್ನಲಾಗಿದ್ದು, ಶನಿವಾರ ಹುಣಸೆ ಹಣ್ಣು ತಿನ್ನುತ್ತಿದ್ದ ಸಂದರ್ಭದಲ್ಲಿ ಬೀಜ ನುಂಗಿದ್ದಾನೆ. ಪರಿಣಾಮ ಹುಣಸೆ ಬೀಜ(Tamarind Seeds) ಗಂಟಲಲ್ಲಿ ಸಿಲುಕಿ ಉಸಿರಾಟದಲ್ಲಿ ತೊಂದರೆಯಾಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಕೂಡಲೇ ಪಾಲಕರು ಸ್ಥಳೀಯ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಮಾರ್ಗ ಮಧ್ಯೆ ಆತ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.