ಚಿಕ್ಕಬಳ್ಳಾಪುರ: ವಿದ್ಯುತ್ ತಂತಿ ತಗುಲಿದ ಪರಿಣಾಮ 12 ವರ್ಷದ ಬಾಲಕಿ ಸಾವನ್ನಪ್ಪಿರುವ ಧಾರುಣ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಅಚೇಪಲ್ಲಿ ಗ್ರಾಮದಲ್ಲಿ ನಡೆದಿದೆ.
ದಿಬ್ಬೂರುಹಳ್ಳಿ ಮೂಲದ ದೇವಪ್ಪ(12) ಸಾವನ್ನಪ್ಪಿದ ದುರ್ದೈವಿ. ಮೇಕೆಗಳಿಗಾಗಿ ಮರವೇರಿ ರೆಂಬೆ ಕಡಿಯುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಈ ಕುರಿತು ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.