ಬಳ್ಳಾರಿ : ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಕಂಪ್ಲಿ (Kampli) ಪಟ್ಟಣದ 5ನೇ ವಾರ್ಡ್ನ ಇಂದಿರಾನಗರದಲ್ಲಿ ಬೆಳಿಕಿಗೆ ಬಂದಿದೆ.
ಇಂದಿರಾನಗರದ ಮುತ್ಯಾಲ ರಾಘವೇಂದ್ರ ಮತ್ತು ತುಳಸಿ ದಂಪತಿಗಳ ಪುತ್ರಿ ಪ್ರಿಯದರ್ಶಿನಿ ಮೆಂಥೋಪ್ಲಸ್ ಡಬ್ಬಿ ನುಂಗಿ ಸಾವನ್ನಪ್ಪಿದ ದುರ್ದೈವಿ ಮಗು. ಆಟವಾಡುತ್ತಿದ್ದಾಗ ಕೈಗೆ ಸಿಕ್ಕಿದ ಮೆಂಥೋಪ್ಲಸ್ ನ ಚಿಕ್ಕ ಡಬ್ಬಿಯನ್ನು ಈ ಮುಗು ನುಂಗಿದೆ. ಕೂಡಲೇ ಮಗುವಿಗೆ ಉಸಿರಾಟ ತೊಂದರೆ ಹೆಚ್ಚಾಗಿದ್ದು ಖಾಸಗಿ ವೈದ್ಯರ ಬಳಿ ಪೋಷಕರು ಕರೆದುಕೊಂಡು ಹೋಗಿದ್ದಾರೆ.
ಆದರೆ, ಮಗು ಮಾರ್ಗ ಮಧ್ಯೆಯೇ ಸಾವನ್ನಪ್ಪಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ. ದುರ್ದೈವ ಎಂದರೆ ಈ ದಂಪತಿ ಮದುವೆಯಾಗಿ 10 ವರ್ಷಗಳ ನಂತರ ಮಗುವಿನ ಭಾಗ್ಯ ಪಡೆದಿದ್ದರು. ಆದರೆ, ವಿಧಿ, ಅದನ್ನು ಕಿತ್ತುಕೊಂಡಿದ್ದು, ದಂಪತಿಯ ಆಕ್ರಂದನ ಮುಗಿಲು ಮುಟ್ಟಿತ್ತು.