ದಾವಣಗೆರೆ: ನಡುರಸ್ತೆಯಲ್ಲಿಯೇ ನೆಟ್ಟಿದ್ದ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
ದಾವಣಗೆರೆ ನಗರದ ನಿಟ್ಟುವಳ್ಳಿ 60 ಅಡಿ ರಸ್ತೆಯ ಆಂಜನೇಯ ದೇವಸ್ಥಾನದ ಹತ್ತಿರ ಈ ಘಟನೆ ನಡೆದಿದೆ. ನಿಟ್ಟುವಳ್ಳಿ ಭಗೀರಥ ಸರ್ಕಲ್ ಹತ್ತಿರ ನಿವಾಸಿ ಗಣೇಶ್ (40) ಸಾವನ್ನಪ್ಪಿದ್ದಾನೆ.
ರಸ್ತೆ ನಡುವೆ ಬ್ಯಾನರ್ ಕಟ್ಟಲು ಕಂಬ ಹಾಕಲಾಗಿತ್ತು. ಆದರೆ, ಇದನ್ನು ಗಮನಿಸಿದೆ ಬಂದಿದ್ದ ಟಿಟಿ ವಾಹನ ಆ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಂಬ ಮುರಿದು ಎದುರಿಗೆ ಬರುತ್ತಿದ್ದ ಬೈಕ್ ಸವಾರನ ತಲೆಯ ಮೇಲೆ ಬಿದ್ದಿದೆ. ಕೂಡಲೇ ಬೈಕ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.
ಸದ್ಯ ನಡು ರಸ್ತೆಯಲ್ಲಿ ಕಂಬ ನೆಟ್ಟವರ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕುರಿತು ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.