ಬೆಂಗಳೂರು: ಕಾರೊಂದು ಚಲಿಸುತ್ತಿದ್ದ ಸಂದರ್ಭದಲ್ಲಿ ರಸ್ತೆಯಲ್ಲಿಯೇ ಹೊತ್ತಿ ಉರಿದು, ಓರ್ವ ವ್ಯಕ್ತಿ ಸಜೀವ ದಹನವಾಗಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಮಾರುತಿ ಎಕ್ಸ್ ಎಲ್ 6 ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ. ಈ ಘಟನೆ ನೆಲಮಂಗಲದ ಅಂಚೆಪಾಳ್ಯದ ಹತ್ತಿರ ನಡೆದಿದೆ.
ಕಾರಿಗೆ ಏಕಾಏಕಿ ಬೆಂಕಿ ಹತ್ತುತ್ತಿದ್ದಂತೆ ವ್ಯಕ್ತಿ ಹೊರಗೆ ಬರಲು ಆಗದಿದ್ದರೆ, ಸಜೀವ ದಹನವಾಗಿದ್ದಾರೆ. ಕಾರು ಸಂಪೂರ್ಣವಾಗಿ ಭಸ್ಮವಾಗಿದೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ದೌಡಾಯಿಸಿ ಪರಿಶಿಲನೆ ನಡೆಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.