ತುಮಕೂರು: ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಶಿರಾ ತಾಲೂಕಿನ ಚಿಕ್ಕನಹಳ್ಳಿ ಹತ್ತಿರ ಈ ಘಟನೆ ನಡೆದಿದೆ. ಘಟನೆಯಲ್ಲಿ ಅಥಣಿ ಮೂಲದ ಉಮೇಶ ನಾಗಪ್ಪ ಹಾಗೂ ಸಂತೋಷ ಸುರೇಶ ಸಾವನ್ನಪ್ಪಿದ ದುರ್ದೈವಿಗಳು. ದ್ರಾಕ್ಷಿ ತುಂಬಿಕೊಂಡು ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಕಾರು ಚಾಲಕ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.