ಬಳ್ಳಾರಿ: ಭೀಕರ ಅಪಘಾತವೊಂದು ನಡೆದಿದ್ದು, ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಘಟನೆ ಆಂಧ್ರ ಪ್ರದೇಶದ ಮೆಹಬೂಬನಗರ ಜಿಲ್ಲೆ ಕೊತಕೋಟ ಬೈಪಾಸ್ ನಲ್ಲಿ ನಡೆದಿದೆ. ಸಾವನ್ನಪ್ಪಿದ ದುರ್ದೈವಿಗಳನ್ನು ಬಳ್ಳಾರಿ ಮೂಲದವರು ಎನ್ನಲಾಗಿದೆ. ಕಾರು ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಫಾತೀಮಾ(50), ಅಬ್ದುಲ್ ರೆಹಮಾನ್(30), ಮಾರಿಯಾ(32), ವಾಸೀಂ(01), ಬುಸ್ರಾ(02) ಮೃತ ದುರ್ದೈವಿಗಳು ಎನ್ನಲಾಗಿದೆ. ಅಲ್ಲದೇ, ಘಟನೆಯಲ್ಲಿ ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕುಟುಂಬಸ್ಥರೆಲ್ಲ ಸೇರಿಕೊಂಡು ಹೈದರಾಬಾದ್ ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.