ಆಯ ತಪ್ಪಿ ಕಾರೊಂದು ನದಿಗೆ ಹಾರಿದ ಪರಿಣಾಮ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಹಿಮಾಚಲ ಪ್ರದೇಶ(Himachal Pradesh)ದ ಕಿನ್ನೌರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಚೆನ್ನೈನ ಮಾಜಿ ಮೇಯರ್(Former Mayor) ಪುತ್ರ ಸೇರಿದಂತೆ ಕಾರಿನಲ್ಲಿದ್ದವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಮಾಜಿ ಮೇಯರ್ ಸೈದೈ ದುರೈಸಾಮಿ ಪುತ್ರ ವೆಟ್ರಿ ದುರೈಸಾಮಿ (45) ತಮ್ಮ ಸಹ ಪ್ರಯಾಣಿಕ ಗೋಪಿನಾಥ್ ಅವರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದರು. ಹಿಮಾಚಲ ಪ್ರದೇಶದ ಟಬೋ ನಿವಾಸಿ ತೆಂಜಿನ್ ಎಂಬ ವ್ಯಕ್ತಿ ವಾಹನ ಚಲಾಯಿಸುತ್ತಿದ್ದ. ಆದರೆ, ಚಾಲಕನ ನಿಯಂತ್ರಣ ತಪ್ಪಿ ಕಾರು ನದಿಗೆ ಹಾರಿದೆ.
ಕೂಡಲೇ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಗೋಪಿನಾಥ್ ಅವರನ್ನು ರಕ್ಷಿಸಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಟೆಂಜಿನ್ ಘಟನೆಯಲ್ಲಿ ಸಾವನ್ನಪ್ಪಿದ್ದರೆ, ದುರೈಸಾಮಿಗಾಗಿ ಹುಡುಕಾಟ ನಡೆಯುತ್ತಿದೆ. ವೆಟ್ರಿ ದುರೈಸಾಮಿ ಛಾಯಾಗ್ರಾಹಕ ಮತ್ತು ಚಲನಚಿತ್ರ ನಿರ್ದೇಶಕ ಎನ್ನಲಾಗಿದೆ.