ಕಾರವಾರ: ಅತಿ ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಬದಿ ವಿಶ್ರಾಂತಿಗಾಗಿ ಕುಳಿತಿದ್ದ ಐವರು ಕಾರ್ಮಿಕರ ಮೇಲೆ ಹರಿದ ಘಟನೆ ನಡೆದಿದೆ.
ಈ ಘಟನೆ ಶಿರಸಿಯ ಹಿಪ್ನಳ್ಳಿ ಕ್ರಾಸ್ ಹತ್ತಿರ ನಡೆದಿದೆ. ವಿಶ್ರಾಂತಿಗಾಗಿ ರಸ್ತೆ ಬದಿ ಕಾರ್ಮಿಕರು ಕುಳಿತಿದ್ದರು. ಈ ವೇಳೆಯೇ ಕಾರು ಹರಿದಿದ್ದು, ಮಗು ಹಾಗೂ ಕಾರ್ಮಿಕರೊಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಈ ಕಾರು ಶಿರಸಿಯಿಂದ ಕುಮಟಾ ಮಾರ್ಗವಾಗಿ ಚಲಿಸುತ್ತಿತ್ತು ಎನ್ನಲಾಗಿದೆ. ಚಾಲಕನ ನಿರ್ಲಕ್ಷ್ಯ ಹಾಗೂ ಅತೀ ವೇಗ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಕೂಡಲೇ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರ್ಮಿಕರನ್ನು ಹೈದರಾಬಾದ್ ಮೂಲದವರು ಎನ್ನಲಾಗಿದೆ. ಈ ಕುರಿತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.