ಕೊಡಗು: ಅಕ್ರಮ ಸಂಬಂಧಕ್ಕೆ ಮಗು ಹುಟ್ಟಿದ ಹಿನ್ನೆಲೆಯಲ್ಲಿ ತಂದೆ, ಅಜ್ಜಿ ಕುತ್ತಿಗೆ ಹಿಚುಕಿ ಕೊಂದ ಘಟನೆ ನಡೆಯಿತು.
ಕುಶಾಲನಗರ ತಾಲ್ಲೂಕಿನ ಗದ್ದೆಹಳ್ಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಂದೆ ಕುಮಾರ (37), ಅಜ್ಹಿ ಯಮುನಾ (57) ಕೊಲೆ ಆರೋಪಿ ಎನ್ನಲಾಗಿದೆ. ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಕೊಂದ ಬಳಿಕ ಮೃತ ಹಸುಗೂಸನ್ನು ಗದ್ದೆಯಲ್ಲಿ ಹೂತಿಟ್ಟಿದ್ದಾರೆ.
ಆರೋಪಿ ವಿವಾಹಿತನಾಗಿದ್ದರೂ ಮತ್ತೊಬ್ಬ ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಹೆರಿಗೆಗೆಂದು ಕುಮಾರನ ಪತ್ನಿ ತವರಿಗೆ ತೆರಳಿದ್ದಳು. ಈ ವೇಳೆ ಗರ್ಭಿಣಿ ಯುವತಿಯನ್ನು ಮನೆಗೆ ಕರೆತಂದ ಕುಮಾರ್, ಮಗು ಜನಿಸಿದ ನಂತರ ತಾನೇ ಸಾಕುವುದಾಗಿ ಪ್ರೇಯಸಿಗೆ ಭರವಸೆ ನೀಡಿದ್ದಾನೆ. ಆಗ ಯುವತಿ ಮನೆಯಲ್ಲಿ ಜನ್ಮ ನೀಡಿದ್ದಾಳೆ. ಮಗು ಹುಟ್ಟುತ್ತಿದ್ದಂತೆ ಹತ್ಯೆ ಮಾಡಿ ಗದ್ದೆಯಲ್ಲಿ ಗುಂಡಿ ತೋಡಿ ಮಣ್ಣು ಮುಚ್ಚಿದ್ದಾರೆ. ಸದ್ಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.