ಧಾರವಾಡ: ಪಾಪಿ ತಂದೆಯಿಂದಲೇ ಗೋಡೆಗೆ ಎಸೆಯಲ್ಪಟ್ಟಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.
1 ವರ್ಷದ ಶ್ರೇಯಾ ಸಾವನ್ನಪ್ಪಿದ ದುರ್ದೈವಿ ಕಂದಮ್ಮ. ತಂದೆ ಶಂಭುಲಿಂಗಯ್ಯ ಕೊಲೆ ಮಾಡಿರುವ ಆರೋಪಿ. ಈ ಘಟನೆ ಜಿಲ್ಲೆಯ ಯಾದವಾಡ ಗ್ರಾಮದಲ್ಲಿ ನಡೆದಿದೆ.
ನಾಲ್ಕು ವರ್ಷಗಳ ಹಿಂದೆ ಶಂಭಯ್ಯ ಮತ್ತು ಸವಿತಾ ವಿವಾಹವಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಶಂಭಯ್ಯ ಧಾರವಾಡ ನಗರದಲ್ಲಿ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಪ್ರತಿ ದಿನವೂ ಕುಡಿದ ಮನೆಗೆ ಬಂದು ಗಲಾಟೆ ಮಾಡುತ್ತಿದ್ದ. ಇದೇ ರೀತಿ ಮಗು ಅಳುತ್ತಿದೆ ಎಂದು ತನ್ನ ಹಲ್ಲೆ ಮಾಡಿ ಬಳಿಕ ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ ಎಂದು ಪತ್ನಿ ಸವಿತಾ ಹಾಗೂ ಸಹೋದರ ಅಳಿಯ ಕಲ್ಲಯ್ಯ ಆರೋಪಿಸಿದ್ದಾರೆ.
ಆತ ನೆಲಕ್ಕೆ ಬಡಿಯುತ್ತಿದ್ದಂತೆ ಮಗು ತಲೆಗೆ ಗಂಭೀರ ಪೆಟ್ಟು ಬಿದ್ದಿತ್ತು. ಹೀಗಾಗಿ ಹುಬ್ಬಳ್ಳಿ ಕಿಮ್ಸ್ ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ. ಕುಟುಂಬಸ್ಥರು ಆರೋಪಿ ವಿರುದ್ಧ ದೂರು ನೀಡಿದ್ದು, ಗರಗ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.