ತಮ್ಮ ಬಾಲ್ಯ ಸ್ನೇಹಿತ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ಕೇಳಿ ನಟ ಚಿರಂಜೀವಿ ಅವರು ಓಡೋಡಿ ಆಸ್ಪತ್ರೆಗೆ ಬಂದಿದ್ದಾರೆ.
ಚಿರಂಜೀವಿ ಅವರು ತಮ್ಮ ಸ್ವಂತ ಬಲದಿಂದಲೇ ಚಿತ್ರರಂಗಕ್ಕೆ ಕಾಲಿಟ್ಟವರು. ಹೀಗಾಗಿ ಸಾಕಷ್ಟು ನಟರಿಗೆ ಚಿರಂಜೀವಿ ಸ್ಫೂರ್ತಿ ಕೂಡ ಆಗಿದ್ದಾರೆ. ಚಿರಂಜೀವಿ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಕಷ್ಟದಲ್ಲಿದ್ದವರಿಗೆ ಕೂಡ ಅವರು ಸಹಾಯ ಮಾಡಲು ಯಾವಾಗಲೂ ಮುಂದೆ. ಕೊರೊನಾ ಸಂದರ್ಭದಲ್ಲಿ ಅವರು ಆಕ್ಸಿಜನ್ ಬ್ಯಾಂಕ್ ಗಳನ್ನು ಸ್ಥಾಪಿಸಿದ್ದರು. ಕಷ್ಟದಲ್ಲಿರುವ ಸಹ ನಟ ನಟರು, ಅಭಿಮಾನಿಗಳಿಗೆ ಸಾಕಷ್ಟು ಬಾರಿ ಸಹಾಯ ಮಾಡಿರುವ ನಿದರ್ಶನಗಳೂ ಇವೆ.
ಸದ್ಯ ಚಿರಂಜೀವಿ ಅವರು, 157ನೇ ಸಿನಿಮಾಕ್ಕೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಸಂದರ್ಭದಲ್ಲಿಯೇ ಅವರು ಹೈದರಾಬಾದ್ನ ಅಪೋಲೊ ಆಸ್ಪತ್ರೆಗೆ ಧಾವಿಸಿದ್ದಾರೆ. ಸದ್ಯ ಈ ಫೋಟೋ ವೈರಲ್ ಆಗಿದೆ. ಮೊಗಲೂರಿನಲ್ಲಿ ಹುಟ್ಟಿ ಬೆಳೆದ ಚಿರಂಜೀವಿಗೆ ಸಾಕಷ್ಟು ಸ್ನೇಹಿತರಿದ್ದಾರೆ. ಅವರಲ್ಲಿ ಓರ್ವರು ಪುವ್ವಾಡ ರಾಜ. ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಈ ವಿಷಯ ಗೊತ್ತಾಗುತ್ತಿದ್ದಂತೆ ಆಸ್ಪತ್ರೆಗೆ ಧಾವಿಸಿ ಸ್ನೇಹಿತನಿಗೆ ಸಹಾಯ ಮಾಡಿದ್ದಾರೆ.
ವೈದ್ಯರೊಂದಿಗೆ ಮಾತನಾಡಿ ತನ್ನ ಸ್ನೇಹಿತನಿಗೆ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ. ಚಿರಂಜೀವಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.