ಉತ್ತರ ಭಾರತದ ಬಹುತೇಕ ರಾಜ್ಯಗಳು ಪ್ರವಾಹ ಪರಿಸ್ಥಿತಿ ಎದುರಿಸುತ್ತಿವೆ. ಪಂಜಾಬ್ (Punjab), ಹರಿಯಾಣ ಹಾಗೂ ಹಿಮಾಚಲ ಪ್ರದೇಶಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ. ಹೀಗಾಗಿ ಹಲವೆಡೆ ನೀರು ನಗರಗಳು ಮತ್ತು ಹಳ್ಳಿಗಳ ಬೀದಿಗಳಲ್ಲಿ ಹರಿಯುತ್ತಿದೆ.
ನೀರಿನೊಂದಿಗೆ ಹಲವು ಜೀವಿಗಳು ಕೂಡಾ ನಾಡಿಗೆ ಕಾಲಿಟ್ಟಿವೆ. ಅಂಬಾಲದ ಬೀದಿಗಳಲ್ಲಿ ಇತ್ತೀಚಿನ ದಿನಗಳಲ್ಲಿ ಇದೇ ರೀತಿಯ ದೃಶ್ಯ ಕಂಡುಬಂದಿದ್ದು ಜನರು ಭಯಭೀತರಾಗಿದ್ದಾರೆ. ನೀರಿನಲ್ಲಿ ಮೊಸಳೆಯೊಂದು ಇಲ್ಲಿನ ಬೀದಿಗಳಲ್ಲಿ ಕಾಣಿಸಿಕೊಂಡಿದೆ. ಈ ಮೊಸಳೆ ರಸ್ತೆಯಲ್ಲಿ ಸುತ್ತಾಡುತ್ತಿರುವುದನ್ನು ಕಂಡು ಜನರು ಗಾಬರಿಯಾಗಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ.