ಸರ್ಕಾರದಿಂದ ಉಚಿತ ವಿದ್ಯುತ್ ನೀಡಲಾಗುತ್ತಿದೆ. ನಾವು ಬಿಲ್ ಕಟ್ಟುವುದಿಲ್ಲ. ಬೇಕಾದರೆ, ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ ಮನೆಗೆ ಹೋಗಿ ಕೇಳಿ ಎಂದು ಗ್ರಾಹಕರೊಬ್ಬರು ಬಿಲ್ ಕಲೆಕ್ಟರ್ ಗೆ ಅವಾಜ್ ಹಾಕಿರುವ ಘಟನೆ ನಡೆದಿದೆ.
ಬೀದರ್ ದಕ್ಷಿಣ ಕ್ಷೇತ್ರ ಯದ್ದಲಾಪುರ್ ಗ್ರಾಮದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಕಾಡ್೯ನಲ್ಲಿ ಕರೆಂಟ್ ನ್ನು ಉಚಿತವಾಗಿ ನೀಡಲಾಗಿದೆ. ಹೀಗಾಗಿ ನಾವು ಬಿಲ್ ಕಟ್ಟುವುದಿಲ್ಲ ಎಂದು ಬೀದರ್ ನ ಗ್ರಾಹಕ ಕರೆಂಟ್ ಬಿಲ್ ವಸುಲಿಗೆ ಬಂದ ಸಿಬ್ಬಂದಿ ಜೊತೆಗೆ ಕಿರಿಕ್ ಮಾಡಿದ್ದಾರೆ
ಕಾಂಗ್ರೆಸ್ ಪಕ್ಷವು ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ವಿದ್ಯುತ್ ಉಚಿತ ಮತ್ತು ಹಲವು ಯೋಜನೆ ನೀಡುತ್ತೇವೆ ಎಂದು ಭರವಸೆ ನೀಡಿತ್ತು. ಕಾಂಗ್ರೆಸ್ ಪಕ್ಷ 135 ಸ್ಥಾನ ಪಡೆಯುವ ಮೂಲಕ ಸಂಪೂರ್ಣ ಬಹುಮತಕ್ಕೆ ತಲುಪಿರುವ ಕಾರಣ ಜನರು ಉಚಿತ ವಿದ್ಯುತ್ ಸೇವೆ ನೀಡುವಂತೆ ಜೆಸ್ಕಾಂ ಅಧಿಕಾರಿಗಳ ಜೋತೆ ವಾದ ನಡೆಸಿದ್ದಾರೆ. ಇಂತಹ ಹಲವಾರು ಘಟನೆಗಳು ರಾಜ್ಯದಲ್ಲಿ ಬೆಳಕಿಗೆ ಬರುತ್ತಿವೆ.