ಕೇರಳದ ಆರಾಟ್ಟುಪುಳ ಉತ್ಸವದ ಸಂದರ್ಭದಲ್ಲಿ ಎರಡು ಆನೆಗಳ ಮಧ್ಯೆಯೇ ಕಾಳಗ ನಡೆದಿರುವ ಘಟನೆ ನಡೆದಿದೆ.
ಹೀಗಾಗಿ ಕಾಲ್ತುಳಿತ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ಉತ್ಸವಗಳಲ್ಲಿ ದೇವರನ್ನು ಆನೆಯ ಮೇಲೆ ಕೂರಿಸಿ ಮೆರವಣಿಗೆ ಮಾಡುವುದು ಇಲ್ಲಿಯ ಸಂಪ್ರದಾಯವಾಗಿತ್ತು. ಹೀಗಾಗಿ ಆನೆಗಳು ಭಾಗವಹಿಸಿದ್ದವು. ಉತ್ಸವ ವೀಕ್ಷಿಸಲು ಜನರು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದರು. ಆದರೆ, ಭಾಗವಹಿಸಿದ್ದ ಆನೆಗಳ ಮಧ್ಯೆಯೇ ಕಾಳಗ ನಡೆದಿದ್ದು, ಕಾಲ್ತುಳಿತ ಸಂಭವಿಸಿದೆ. ಈ ವೇಳೆ ಹಲವರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನೆಯಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ದೇವಾಲಯವನ್ನು 8ನೇ ಶತಮಾನದಲ್ಲಿ ಅಭಿವೃದ್ಧಿ ಪಡಿಸಲಾಗಿದೆ ಎನ್ನಲಾಗುತ್ತಿದೆ. ಶ್ರೀರಾಮನ ಗುರು ವಶಿಷ್ಠರ ದೈವಿ ಆತ್ಮವು ಈ ದೇವಾಲಯದ ವಿಗ್ರಹಗಳಲ್ಲಿ ನೆಲೆಸಿದೆ ಎಂದು ನಂಬಲಾಗಿದೆ.
ಆನೆಗಳು ಒಂದು ಗಂಟೆಯ ಕಾಲ ಕಾಳಗ ನಡೆಸಿವೆ. ಆನಂತರ ಸರಪಳಿ ಹಾಕಿ ದೇವಾಲಯಕ್ಕೆ ತರಲಾಯಿತು.