ಕಟ್ಟಡದ ಪಾರ್ಕಿಂಗ್ ಸ್ಥಳದಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 16ಕ್ಕೂ ಅಧಿಕ ಕಾರುಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ಈ ಘಟನೆ ಮುಂಬಯಿನ ದಾದರ್ ಪ್ರದೇಶದ ಹರಿಶ್ಚಂದ್ರ ಯವಾಲೆ ಮಾರ್ಗದಲ್ಲಿನ ಕೊಹಿನೂರ್ ಕಟ್ಟಡದ ಪಾರ್ಕಿಂಗ್ ಸ್ಥಳದಲ್ಲಿ ಈ ಘಟನೆ ನಡೆದಿದೆ. ಕಳೆದ ರಾತ್ರಿ ಏಕಾಏಕಿ ಬೆಂಕಿ ಹೊತ್ತಿದ ಪರಿಣಾಮ ಈ ಘಟನೆ ನಡೆದಿದೆ. ಆದರೆ, ಘನಟೆಯಲ್ಲಿ ಯಾವುದೇ ಸೋವು-ನೋವಿನ ವರದಿಯಾಗಿಲ್ಲ. ಸದ್ಯಕ್ಕೆ ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.