ತುಮಕೂರು: ಲಾರಿಯೊಂದು ನಿಂತಿದ್ದ ಕ್ರೂಸರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ತುಮಕೂರಿನ (Tumakuru) ಕೋರಾ ಬಳಿಯ ರಾಷ್ಟ್ರೀಯ ಹೆದ್ದಾರಿ (Highway) 4ರಲ್ಲಿ ನಡೆದಿದೆ. ಕ್ರೂಸರ್ ಚಾಲಕ ಶಂಕರ್ (35), ಖಾಸಗಿ ಪಡಿತರ ವಿತರಣಾ ಕೇಂದ್ರದ ಮಾಲೀಕ ಸತೀಶ್ (40) ಸಾವನ್ನಪ್ಪಿದ ದುರ್ದೈವಿಗಳು ಎನ್ನಲಾಗಿದೆ.
ಈ ಘಟನೆಯಲ್ಲಿ ಸಾವನ್ನಪ್ಪಿದವರು ಗಂಗಾವತಿ (Gangavati) ಮೂಲದವರು ಎನ್ನಲಾಗಿದೆ. ಇವರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದರು ಎನ್ನಲಾಗಿದೆ. ಈ ಕುರಿತು ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.