ನವದೆಹಲಿ : ವಿದೇಶಿ ಮಹಿಳೆಯ ಗರ್ಭದಲ್ಲಿ ಜನಿಸಿದ ವ್ಯಕ್ತಿ ದೇಶಭಕ್ತನಾಗಲು ಸಾಧ್ಯವಿಲ್ಲ ಎಂದು ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
“ವಿದೇಶಿ ಮಹಿಳೆಯ ಗರ್ಭದಲ್ಲಿ ಜನಿಸಿರುವ ವ್ಯಕ್ತಿ ರಾಷ್ಟ್ರ ಭಕ್ತನಾಗಲು ಸಾಧ್ಯವಿಲ್ಲ.ಮಣ್ಣಿನ ಮಗ ಮಾತ್ರ ತಾಯ್ನಿಡನ್ನು ರಕ್ಷಿಸುತ್ತಾನೆ ಎಂದು ಚಾಣಕ್ಯ ಹೇಳಿದ್ದಾನೆ”. ಹೀಗಾಗಿ “ಎರಡು ದೇಶಗಳಲ್ಲಿ ಪೌರತ್ವ ಹೊಂದಿರುವವರಿಂದ ದೇಶಭಕ್ತಿ ನಿರೀಕ್ಷಿಸಲು ಸಾಧ್ಯವಿಲ್ಲ” ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಅವರ ದೇಶಭಕ್ತಿಯನ್ನು ಪ್ರಶ್ನಿಸಿದ್ದಾರೆ ಪ್ರಜ್ಞಾ ಸಿಂಗ್.
ಇನ್ನು ಪ್ರಜ್ಞಾ ಸಿಂಗ್ ಠಾಕೂರ್ ಹೇಳಿಕೆಗೆ ಸೋಶಿಯಲ್ ಮೀಡಿಯಾಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರ ಹಾಕುತ್ತಿದ್ದಾರೆ.
ಈ ಹಿಂದೆ ಕೂಡ ಮಹಾತ್ಮ ಗಾಂಧಿಯ ಹಂತಕ ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಕರೆಯುವ ಮೂಲಕ ಪ್ರಜ್ಞಾ ಸಿಂಗ್ ವಿವಾದಕ್ಕೆ ಸಿಲುಕಿದ್ದರು.