ಮದುವೆ ನಿಶ್ಚಯವಾಗಿದ್ದ ಮಧುಮಗಳಿಗೆ ಬಲವಂತವಾಗಿ ತಾಳಿಕಟ್ಟಿದ ಯುವಕ..!
ಹಾಸನ: ವಿವಾಹ ನಿಗದಿಯಾಗಿದ್ದ ಮಧುಮಗಳಿಗೆ ಯುವಕನೊಬ್ಬ ಬಲವಂತವಾಗಿ ತಾಳಿಕಟ್ಟಿದ ಘಟನೆ ಸಕಲೇಶಪುರದ ಕುಶಾಲನಗರ ಬಡಾವಣೆಯಲ್ಲಿ ನಡೆದಿದೆ. ಅರೆಕೆರೆ ಗ್ರಾಮದ ಯುವಕ ಸತೀಶ್ ಬಲವಂತವಾಗಿ ಯುವತಿಗೆ ತಾಳಿ ಕಟ್ಟಿದ್ದಾನೆ ಎನ್ನಬಲಾಗಿದ್ದು, ಆತನ ವಿರುದ್ಧ ಕೇಸ್ ದಾಖಲಾಗಿದೆ.
ಜನವರಿ 25ಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಯುವಕ ಸುಜಿತ್ ಕೃಷ್ಣ ಎಂಬುವವರ ಜತೆ ಯುವತಿಗೆ ಮದುವೆ ನಿಶ್ಚಯವಾಗಿತ್ತು. ಕುಟುಂಬ ಎಲ್ಲ ತಯಾರಿ ಮಾಡಿಕೊಂಡಿದ್ದರು. ಆದರೆ, ಮದುವೆ ನಿಶ್ಚಯವಾಗಿರುವ ಹುಡುಗಿಯನ್ನು ತಾನು ಪ್ರೀತಿಸುತ್ತಿರುವುದಾಗಿ ಆರೋಪಿ ಸತೀಶ್ ಸ್ನೇಹಿತರ ಬಳಿ ಹೇಳಿಕೊಂಡಿದ್ದ.
ಹನುಮಂತ ದೇವರ ಚಿತ್ರದೊಂದಿಗೆ ಭಾರತಕ್ಕೆ ಧನ್ಯವಾದ ಸಲ್ಲಿಸಿ ಭಾರತೀಯರ ಮನಗೆದ್ದ ಬ್ರೆಜಿಲ್ ಅಧ್ಯಕ್ಷ..!
ಇತ್ತ ಸತೀಶ್ ಆತ್ಮಹತ್ಯೆ ಯತ್ನವೂ ನಡೆಸಿದ್ದನಂತೆ. ಹೀಗಾಗಿ ಆತನ ಸ್ನೇಹಿತರು ಸತೀಶ್ನನ್ನು ಯುವತಿಯ ಮನೆಗೆ ಕರೆದೊಯ್ದು ಅರಿಶಿಣಕೊಂಬು ಕಟ್ಟಿಸಿ ಅಲ್ಲೇ ಬಲವಂತವಾಗಿ ಮದುವೆ ಮಾಡಿಸಿರುವ ಆರೋಪ ಮಾಡಲಾಗಿದೆ. ಮಗಳಿಗೆ ಇಷ್ಟವಿಲ್ಲದಿದ್ದರೂ ಬೆದರಿಸಿ ಬಲವಂತವಾಗಿ ಮದುವೆಯಾಗಿದ್ದಾರೆಂದು ಈ ಯುವತಿಯ ತಾಯಿ ಸಕಲೇಶಪುರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.. ಗೆಳೆಯರ ಜತೆ ಬಂದು ಹೆದರಿಸಿ ತಾಳಿಕಟ್ಟಿ ಕರೆದೊಯ್ದಿದ್ದಾರೆ. ತಮ್ಮ ಮಗಳ ಪ್ರಾಣಕ್ಕೆ ಬೆದರಿಕೆ ಇದ್ದು, ಆಕೆಯನ್ನು ರಕ್ಷಿಸಿ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel