ಚಾಮರಾಜನಗರ: ಅರಣ್ಯ ಇಲಾಖೆ ಹಾಗೂ ಬೇಟೆಗಾರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ವ್ಯಕ್ತಿ ಗುಂಡೇಟಿಗೆ ಬಲಿಯಾಗಿದ್ದಾನೆ.
ಈ ಘಟನೆ ಬಂಡೀಪುರದ (Bandipur) ಮದ್ದೂರು ಅರಣ್ಯ ವಲಯದಲ್ಲಿ ನಡೆದಿದೆ. ಭೀಮನಬೀಡು ಗ್ರಾಮದ ಮನು (35) ಗುಂಡೇಟಿಗೆ ಬಲಿಯಾದ ವ್ಯಕ್ತಿ ಎನ್ನಲಾಗಿದೆ. 10 ಜನ ಬೇಟೆಗಾರರು ಅರಣ್ಯ ವಲಯದಲ್ಲಿ ಕಡವೆ ಭೇಟೆಯಾಡಿ ಮಾಂಸ ಕೊಂಡೊಯ್ಯುತ್ತಿದ್ದರು. ಈ ವೇಳೆ ಅವರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬೆನ್ನಟ್ಟಿದ್ದಾರೆ. ಈ ಸಂದರ್ಭದಲ್ಲಿ ಬೇಟೆಗಾರು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ್ದಾರೆ.
ಹೀಗಾಗಿ ಪ್ರತಿ ದಾಳಿಯನ್ನು ಅಧಿಕಾರಿಗಳು ನಡೆಸಿದ್ದಾರೆ. ಈ ಸಂದರ್ಭದಲ್ಲಿ ಬೇಟೆಗಾರನಿಗೆ ಗುಂಡು ತಗುಲಿದ್ದು ಆತ ಸಾವನ್ನಪ್ಪಿದ್ದಾನೆ.
ಘಟನೆ ನಡೆದ ನಂತರ ಬೇಟೆಗೆ ಬಂದಿದ್ದವರು ಅಲ್ಲಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.