ವ್ಯಕ್ತಿಯೊಬ್ಬ ನಡು ರಸ್ತೆಯಲ್ಲೇ ಹಿಮ್ಮುಖವಾಗಿ ಕುಳಿತು ಸ್ಕೂಟಿ ಓಡಿಸಿರುವ ವಿಡಿಯೋವೊಂದು ವೈರಲ್ ಆಗಿದೆ.
ದಿವ್ಯ ಕುಮಾರಿ (divyaKumaari) ಎಂಬವರು ಈ ಕುರಿತ ವಿಡಿಯೋವನ್ನು ಹಂಚಿಕೊಂಡಿದ್ದಾರೆ. “ನೋಡಿ ಜನರು ಎಷ್ಟು ಮೂರ್ಖರು, ಅವರು ಸಾಯುವುದು ಮಾತ್ರವಲ್ಲದೆ ಇತರ ಮುಗ್ಧ ಜನರನ್ನೂ ತೊಂದರೆಗೆ ಸಿಲುಕಿಸುತ್ತಾರೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವಿಡಿಯೋದಲ್ಲಿ ಹಳದಿ ಬಣ್ಣದ ಟೀ-ಶರ್ಟ್ ಧರಿಸಿದ ಭಂಡ ವ್ಯಕ್ತಿಯೊಬ್ಬ ಹಿಮ್ಮುಖವಾಗಿ ಕುಳಿತು ಹೈವೇ ರಸ್ತೆಯಲ್ಲಿ ಸ್ಕೂಟರ್ ಓಡಿಸುತ್ತಿರುವ ಆಘಾತಕಾರಿ ದೃಶ್ಯ ಕಂಡು ಬಂದಿದೆ.
ಕುಡಿಯುವ ನೀರು ಕೃಷಿಗೆ ಬಳಸಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಖಡಕ್ ವಾರ್ನಿಂಗ್
ರಾಜ್ಯದಲ್ಲಿ ಮಳೆಯ ಅಭಾವ ತಲೆದೂರಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರೈತರಿಗೆ ಮತ್ತೊಮ್ಮೆ ಕಟ್ಟುನಿಟ್ಟಿನ ಸಂದೇಶ ರವಾನಿಸಿದ್ದಾರೆ. ಜಲಾಶಯಗಳಿಂದ ಹರಿಸಲಾಗುತ್ತಿರುವ ನೀರನ್ನು ಕೇವಲ ಕುಡಿಯುವ...








