ಶಿವಮೊಗ್ಗ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಮೆಗ್ಗಾನ್ ಜಿಲ್ಲಾಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳ ನಿರ್ಲಕ್ಷ್ಯ ಮತ್ತೊಮ್ಮೆ ಸಾಬೀತಾಗಿದೆ. ಉಸಿರಾಟದ ತೊಂದರೆಯಿಂದ ಬಳುತ್ತಿದ್ದ 37 ವರ್ಷ ರೋಗಿಯು ಆಕ್ಸಿಜನ್ ಸಿಗದಿರುವ ಹಿನ್ನೆಲೆಯಲ್ಲಿ ಸಾವನ್ನಪ್ಪಿದ್ದಾರೆ. ಭದ್ರಾವತಿ ತಾಲೂಕಿನ ಮಾರಶೆಟ್ಟಿಕೊಪ್ಪ ಗ್ರಾಮದ 37 ವರ್ಷದ ನಾಗರಾಜ್ ಉಸಿರಾಟ ತೊಂದರೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಬೆಳಿಗ್ಗೆ ವಾರ್ಡ್ ನಿಂದ ಸ್ಕ್ಯಾನಿಂಗ್ ಮಾಡಲು ನಾಗರಾಜ್ ನನ್ನು ಕರೆದುಕೊಂಡು ಹೋಗುವ ಸಮಯದಲ್ಲಿ ಆರೋಗ್ಯದಲ್ಲಿ ಏರುಪೇರಾಗಿದೆ. ಉಸಿರಾಟದಲ್ಲಿ ತೊಂದರೆಯಾಗಿದೆ. ಆಗ ಆಕ್ಸಿಜನ್ ಅಗತ್ಯವಿದೆ. ಈ ಸಮಯದಲ್ಲಿ ಆಕ್ಸಿಜನ್ ಪೂರೈಕೆಯಾಗಿಲ್ಲ. ಈ ವೇಳೆ ಆರೋಗ್ಯದಲ್ಲಿ ಏರುಪೇರಾಗಿ ಆತ ಸಾವನ್ನಪ್ಪಿದ್ದಾನೆ.
ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯಕ್ಕೆ ರೋಗಿ ನಾಗರಾಜ್ ಮೃತಪಟ್ಟಿದ್ದಾನೆ ಎನ್ನುವುದು ಕುಟುಂಬಸ್ಥರ ಆರೋಪವಾಗಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆಯಷ್ಟೇ ನಾಗರಾಜ್ ವಿವಾಹವಾಗಿದ್ದರು. ಟೇಲರಿಂಗ್ ಕೆಲಸ ಮಾಡಿಕೊಂಡು ಉಪಜೀವನ ಮಾಡಿಕೊಂಡಿದ್ದ ನಾಗರಾಜ್. ಈ ನಡುವೆ ನಿನ್ನೆ ಬೆಳಗ್ಗೆಯಿಂದ ಉಸಿರಾಟದ ಸಮಸ್ಯೆ ಶುರುವಾಗಿದೆ. ಕೆಮ್ಮು ಮತ್ತು ಕಫದಿಂದ ನಾಗರಾಜ್ ಬಳಲುತ್ತಿದ್ದ ಎನ್ನಲಾಗಿದೆ.
ಸದ್ಯ ಈ ಕುರಿತು ತನಿಖೆ ಆರಂಭವಾಗಿದೆ.