ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿದ್ಯಾರ್ಥಿಗಳ ಸೃಜನಶೀಲತೆಗೆ ವೇದಿಕೆ: ಪರಮ್‌ & ವೇದಾಂತ ಭಾರತಿ ಜಂಟಿಯಾಗಿ ʻವೇದಾಂತ ಮೇಕಥಾನ್’

admin by admin
January 7, 2026
in Newsbeat, ನ್ಯೂಸ್ ಬೀಟ್, ಬೆಂಗಳೂರು, ರಾಜ್ಯ
Param & Vedanta Bharati jointly organize `Vedanta Makethon

Param & Vedanta Bharati jointly organize `Vedanta Makethon

Share on FacebookShare on TwitterShare on WhatsappShare on Telegram

• ಪ್ರಾಚೀನ ಜ್ಞಾನಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ
• ದಾರ್ಶನಿಕ ತತ್ವಗಳನ್ನು ಪ್ರಾಯೋಗಿಕವಾಗಿ ಅನುಭವಿಸುವ ವಿಶಿಷ್ಟ ಅವಕಾಶ
• ತಜ್ಞರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಂದ ಸಂವಾದಾತ್ಮಕ ಮಾದರಿಗಳ ಸಿದ್ಧತೆ
• ಅರಮನೆ ಮೈದಾನದಲ್ಲಿ ಜನವರಿ 29ಕ್ಕೆ ಸೃಜನಶೀಲತೆ ಅನಾವರಣ

ಬೆಂಗಳೂರು: ಭಾರತೀಯ ಜ್ಞಾನ ಪರಂಪರೆಯನ್ನು ಆಧುನಿಕ ವಿಜ್ಞಾನದೊಂದಿಗೆ ಬೆಸೆಯುವ ವಿಶಿಷ್ಟ ಪ್ರಯತ್ನವೊಂದಕ್ಕೆ ಉದ್ಯಾನನಗರಿ ಬೆಂಗಳೂರು ಸಾಕ್ಷಿಯಾಗುತ್ತಿದೆ. ಪರಮ್ ಫೌಂಡೇಶನ್ ಮತ್ತು ವೇದಾಂತ ಭಾರತಿ ಜಂಟಿಯಾಗಿ ವಿದ್ಯಾರ್ಥಿಗಳಿಗಾಗಿ ‘ ವೇದಾಂತ ಮೇಕಥಾನ್’ (Vedanta Makeathon) ಎಂಬ ಎರಡು ತಿಂಗಳ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿವೆ.

Related posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

May 4, 2026
ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

May 4, 2026

ವೇದಾಂತ ಮೇಕಥಾನ್: ಪ್ರಶ್ನೆಗಳು ಅನುಭವಗಳಾಗಿ ಬದಲಾಗುವ ವಿಶಿಷ್ಟ ವೇದಿಕೆ

ಪರಮ್ ಫೌಂಡೇಶನ್ ಮತ್ತು ವೇದಾಂತ ಭಾರತಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ ‘ವೇದಾಂತ ಮೇಕಥಾನ್’ (Vedanta Makeathon), ಭಾರತೀಯ ಜ್ಞಾನ ಪರಂಪರೆ (Indian Knowledge Systems) ಮತ್ತು ಆಧುನಿಕ ವಿಜ್ಞಾನವನ್ನು ಬೆಸೆಯುವ ಒಂದು ಅಪೂರ್ವ ಪ್ರಯೋಗವಾಗಿದೆ. ಎರಡು ತಿಂಗಳ ಕಾಲ ನಡೆಯುವ ಈ ನವೀನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವೇದಾಂತದ ‘ಮಾಯೆ’, ‘ಚೈತನ್ಯ’ದಂತಹ ದಾರ್ಶನಿಕ ವಿಚಾರಗಳನ್ನು ದೃಷ್ಟಿ ಭ್ರಮೆ (Illusions) ಅಥವಾ ನರವಿಜ್ಞಾನದಂತಹ ಆಧುನಿಕ ತಂತ್ರಜ್ಞಾನದೊಂದಿಗೆ ಜೋಡಿಸಿ, ಸಂವಾದಾತ್ಮಕ ಪ್ರದರ್ಶಿಕೆಗಳನ್ನು (Interactive Exhibits) ಸಿದ್ಧಪಡಿಸಲಿದ್ದಾರೆ.

ತಜ್ಞರ ಮಾರ್ಗದರ್ಶನದಲ್ಲಿ ಮೂಡಿಬರುವ ಈ ಸೃಜನಶೀಲ ಮಾದರಿಗಳು ಅಂತಿಮವಾಗಿ ಜನವರಿ 29 ರಿಂದ ಫೆಬ್ರುವರಿ 1ರ ವರೆಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆಯಲಿರುವ ‘ದಕ್ಷಿಣಾಸ್ಯ ದರ್ಶಿನಿ’ ಸಾರ್ವಜನಿಕ ಪ್ರದರ್ಶನದಲ್ಲಿ ಅನಾವರಣಗೊಳ್ಳಲಿವೆ. ಇದು ಕೇವಲ ಕಲಿಕೆಯಲ್ಲ, ಪ್ರಾಚೀನ ಜ್ಞಾನವನ್ನು ಪ್ರಾಯೋಗಿಕವಾಗಿ ಅನುಭವಿಸುವ ಒಂದು ಅಪೂರ್ವ ಅವಕಾಶ.

ಕಾರ್ಯಕ್ರಮದ ವಿಶೇಷತೆ:
• ಯಾರಿಗೆಲ್ಲ ಅವಕಾಶ?: ವಿಜ್ಞಾನ, ಎಂಜಿನಿಯರಿಂಗ್ ಮಾತ್ರವಲ್ಲದೆ ವಿನ್ಯಾಸ (Design), ಮನೋವಿಜ್ಞಾನ ಮತ್ತು ಮಾನವಿಕ ವಿಭಾಗದ ವಿದ್ಯಾರ್ಥಿಗಳೂ ಭಾಗವಹಿಸಬಹುದು.
• ತರಬೇತಿ-ಮಾರ್ಗದರ್ಶನ: ಆಯ್ಕೆಯಾದ ತಂಡಗಳಿಗೆ ವಿಜ್ಞಾನಿಗಳು, ಕಲಾಕಾರರು ಮತ್ತು ವಿದ್ವಾಂಸರಿಂದ ಎರಡು ತಿಂಗಳ ಕಾಲ ಮಾರ್ಗದರ್ಶನ ನೀಡಲಾಗುತ್ತದೆ.
• ಕಲಿಕೆ: ತತ್ವಶಾಸ್ತ್ರದ ವಿಚಾರಗಳನ್ನು ಸೆನ್ಸಾರ್‌ಗಳು, ಎಐ (AI) ಮತ್ತು ಎಂಜಿನಿಯರಿಂಗ್ ಬಳಸಿ ಪ್ರದರ್ಶಿಕೆಗಳಾಗಿ ಮಾಡುವ ಕಲೆ ಇಲ್ಲಿ ಸಿದ್ಧಿಸುತ್ತದೆ.

ಪ್ರಮುಖ ದಿನಾಂಕಗಳು ಮತ್ತು ವಿವರ:
• ನೋಂದಣಿ ಅವಧಿ: ನೋಂದಣಿ ಈಗಾಗಲೇ ಆರಂಭವಾಗಿದ್ದು, ಜನವರಿ 15 ರವರೆಗೆ ಇರಲಿದೆ.
• ತಂಡದ ಮಿತಿ: ಪ್ರತಿ ತಂಡದಲ್ಲಿ ಗರಿಷ್ಠ 5 ಸದಸ್ಯರಿರಬಹುದು.
• ಸ್ಥಳ: ಪರಮ್ ಮೇಕರ್ ಸ್ಪೇಸ್, ಜಯನಗರ, ಬೆಂಗಳೂರು.
• ಓರಿಯಂಟೇಶನ್: ಜನವರಿ 15ರಂದು ನಡೆಯಲಿರುವ ಕಾರ್ಯಾಗಾರ.

ಅಂತಿಮ ಪ್ರದರ್ಶನ:
ಈ ಮೇಕಥಾನ್ನಲ್ಲಿ ತಯಾರಾದ ಅತ್ಯುತ್ತಮ ಮಾದರಿಗಳನ್ನು ಜನವರಿ 29 ರಿಂದ ಫೆಬ್ರುವರಿ 1ರ ವರೆಗೆ ಬೆಂಗಳೂರಿನ ಅರಮನೆ ಮೈದಾನದ (ತ್ರಿಪುರ ವಾಸಿನಿ) ಬೃಹತ್ ವೇದಿಕೆಯಲ್ಲಿ ನಡೆಯುವ ‘ದಕ್ಷಿಣಾಸ್ಯ ದರ್ಶಿನಿ’ ಎಂಬ ಸಾರ್ವಜನಿಕ ಪ್ರದರ್ಶನದಲ್ಲಿ ಪ್ರದರ್ಶಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: vedanta-makeathon@paraminnovation.org

ಕೋಟ್‌: ಯುವಜನತೆಯಲ್ಲಿ ಹೊಸ ಆಲೋಚನೆ ಮತ್ತು ಆತ್ಮವಿಶ್ವಾಸ ಮೂಡಿಸಲು ‘ದಕ್ಷಿಣಾಸ್ಯ ದರ್ಶಿನಿ’ ಒಂದು ಉತ್ತಮ ವೇದಿಕೆ. ವೇದಾಂತದ ಸಾರವನ್ನು ವಿಜ್ಞಾನದ ಪ್ರಯೋಗಗಳ ಮೂಲಕ ಇಲ್ಲಿ ವಿವರಿಸಲಾಗುತ್ತದೆ. ಇಂದಿನ ವೇಗದ ಬದುಕಿನಲ್ಲಿ ಯುವಕರಿಗೆ ತಮ್ಮನ್ನು ತಾವು ಅರಿತುಕೊಳ್ಳುವ ಅನಿವಾರ್ಯತೆ ಇದೆ. ಈ ಪ್ರದರ್ಶನದಿಂದ ಸಿಗುವ ತಿಳಿವಳಿಕೆಯು ಜೀವನದ ಸವಾಲುಗಳನ್ನು ಗೆದ್ದು, ಸುಖ-ಶಾಂತಿಯಿಂದ ಬದುಕಲು ಅವರಿಗೆ ಸಹಾಯ ಮಾಡುತ್ತದೆ.​— ಲಕ್ಷ್ಮೀಶ ಸಿಂಹ,  ಟ್ರಸ್ಟಿ, ವೇದಾಂತ ಭಾರತಿ.

Source: A platform for student creativity: Param & Vedanta Bharati jointly organize `Vedanta Makethon'
Via: A platform for student creativity: Param & Vedanta Bharati jointly organize `Vedanta Makethon'
Tags: #Param & Vedanta Bharati#saakshatv#Vedanta Makethonbengalurukarnataka
ShareTweetSendShare
Join us on:

Related Posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

by Shwetha
May 4, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

by Shwetha
May 4, 2026
0

ಮುಂಬೈ: ಭಾರತದ ಮೇಲೆ ನಡೆದ ಸರಣಿ ವಿದೇಶಿ ಆಕ್ರಮಣಗಳು ಮತ್ತು ನೂರಾರು ವರ್ಷಗಳ ಸಂಕಷ್ಟದ ಕಾಲದಲ್ಲೂ ದೇಶದ ಮೂಲ ಗುರುತು ಹಾಗೂ ಸಾಂಸ್ಕೃತಿಕ ಆತ್ಮವನ್ನು ಸಂರಕ್ಷಿಸಿರುವುದು ಆದಿವಾಸಿ...

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

by Shwetha
May 4, 2026
0

ಕುಸ್ತಿ ಲೋಕದಲ್ಲಿ ಮತ್ತು ದೇಶದ ಕ್ರೀಡಾ ವಲಯದಲ್ಲಿ ಬೆಚ್ಚಿಬೀಳಿಸುವಂತಹ ಬೆಳವಣಿಗೆಯೊಂದು ನಡೆದಿದೆ. ಖ್ಯಾತ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮಗೆ ಎದುರಾದ ಕಹಿ ಘಟನೆಯನ್ನು ಸಾರ್ವಜನಿಕವಾಗಿ...

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

by Shwetha
May 4, 2026
0

ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಆಸ್ತಿ ದಾಖಲೆಗಳಿಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸಂಕಷ್ಟ ತಪ್ಪಲಿದ್ದು, ನೇರವಾಗಿ...

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

by Shwetha
May 4, 2026
0

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ತಿಂಗಳುಗಳೇ ಕಳೆದಿವೆ. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ದರ್ಶನ್, ಅಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram