ADVERTISEMENT
Tuesday, January 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿದ್ಯಾರ್ಥಿಗಳ ಸೃಜನಶೀಲತೆಗೆ ವೇದಿಕೆ: ಪರಮ್‌ & ವೇದಾಂತ ಭಾರತಿ ಜಂಟಿಯಾಗಿ ʻವೇದಾಂತ ಮೇಕಥಾನ್’

admin by admin
January 7, 2026
in Newsbeat, ನ್ಯೂಸ್ ಬೀಟ್, ಬೆಂಗಳೂರು, ರಾಜ್ಯ
Param & Vedanta Bharati jointly organize `Vedanta Makethon

Param & Vedanta Bharati jointly organize `Vedanta Makethon

Share on FacebookShare on TwitterShare on WhatsappShare on Telegram

• ಪ್ರಾಚೀನ ಜ್ಞಾನಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ
• ದಾರ್ಶನಿಕ ತತ್ವಗಳನ್ನು ಪ್ರಾಯೋಗಿಕವಾಗಿ ಅನುಭವಿಸುವ ವಿಶಿಷ್ಟ ಅವಕಾಶ
• ತಜ್ಞರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಂದ ಸಂವಾದಾತ್ಮಕ ಮಾದರಿಗಳ ಸಿದ್ಧತೆ
• ಅರಮನೆ ಮೈದಾನದಲ್ಲಿ ಜನವರಿ 29ಕ್ಕೆ ಸೃಜನಶೀಲತೆ ಅನಾವರಣ

ಬೆಂಗಳೂರು: ಭಾರತೀಯ ಜ್ಞಾನ ಪರಂಪರೆಯನ್ನು ಆಧುನಿಕ ವಿಜ್ಞಾನದೊಂದಿಗೆ ಬೆಸೆಯುವ ವಿಶಿಷ್ಟ ಪ್ರಯತ್ನವೊಂದಕ್ಕೆ ಉದ್ಯಾನನಗರಿ ಬೆಂಗಳೂರು ಸಾಕ್ಷಿಯಾಗುತ್ತಿದೆ. ಪರಮ್ ಫೌಂಡೇಶನ್ ಮತ್ತು ವೇದಾಂತ ಭಾರತಿ ಜಂಟಿಯಾಗಿ ವಿದ್ಯಾರ್ಥಿಗಳಿಗಾಗಿ ‘ ವೇದಾಂತ ಮೇಕಥಾನ್’ (Vedanta Makeathon) ಎಂಬ ಎರಡು ತಿಂಗಳ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿವೆ.

Related posts

ಸಂವಿಧಾನದನ್ವಯ ಅಧಿವೇಶನ ಕರೆದಿದ್ದೇವೆ: ಸಿಎಂ ಸಿದ್ದರಾಮಯ್ಯ

ಸಂವಿಧಾನದನ್ವಯ ಅಧಿವೇಶನ ಕರೆದಿದ್ದೇವೆ: ಸಿಎಂ ಸಿದ್ದರಾಮಯ್ಯ

January 20, 2026
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಚಾಲಕರಹಿತ ಮತ್ತೊಂದು ರೈಲು ಬೆಂಗಳೂರಿಗೆ ಆಗಮನ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಚಾಲಕರಹಿತ ಮತ್ತೊಂದು ರೈಲು ಬೆಂಗಳೂರಿಗೆ ಆಗಮನ

January 20, 2026

ವೇದಾಂತ ಮೇಕಥಾನ್: ಪ್ರಶ್ನೆಗಳು ಅನುಭವಗಳಾಗಿ ಬದಲಾಗುವ ವಿಶಿಷ್ಟ ವೇದಿಕೆ

ಪರಮ್ ಫೌಂಡೇಶನ್ ಮತ್ತು ವೇದಾಂತ ಭಾರತಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ ‘ವೇದಾಂತ ಮೇಕಥಾನ್’ (Vedanta Makeathon), ಭಾರತೀಯ ಜ್ಞಾನ ಪರಂಪರೆ (Indian Knowledge Systems) ಮತ್ತು ಆಧುನಿಕ ವಿಜ್ಞಾನವನ್ನು ಬೆಸೆಯುವ ಒಂದು ಅಪೂರ್ವ ಪ್ರಯೋಗವಾಗಿದೆ. ಎರಡು ತಿಂಗಳ ಕಾಲ ನಡೆಯುವ ಈ ನವೀನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವೇದಾಂತದ ‘ಮಾಯೆ’, ‘ಚೈತನ್ಯ’ದಂತಹ ದಾರ್ಶನಿಕ ವಿಚಾರಗಳನ್ನು ದೃಷ್ಟಿ ಭ್ರಮೆ (Illusions) ಅಥವಾ ನರವಿಜ್ಞಾನದಂತಹ ಆಧುನಿಕ ತಂತ್ರಜ್ಞಾನದೊಂದಿಗೆ ಜೋಡಿಸಿ, ಸಂವಾದಾತ್ಮಕ ಪ್ರದರ್ಶಿಕೆಗಳನ್ನು (Interactive Exhibits) ಸಿದ್ಧಪಡಿಸಲಿದ್ದಾರೆ.

ತಜ್ಞರ ಮಾರ್ಗದರ್ಶನದಲ್ಲಿ ಮೂಡಿಬರುವ ಈ ಸೃಜನಶೀಲ ಮಾದರಿಗಳು ಅಂತಿಮವಾಗಿ ಜನವರಿ 29 ರಿಂದ ಫೆಬ್ರುವರಿ 1ರ ವರೆಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆಯಲಿರುವ ‘ದಕ್ಷಿಣಾಸ್ಯ ದರ್ಶಿನಿ’ ಸಾರ್ವಜನಿಕ ಪ್ರದರ್ಶನದಲ್ಲಿ ಅನಾವರಣಗೊಳ್ಳಲಿವೆ. ಇದು ಕೇವಲ ಕಲಿಕೆಯಲ್ಲ, ಪ್ರಾಚೀನ ಜ್ಞಾನವನ್ನು ಪ್ರಾಯೋಗಿಕವಾಗಿ ಅನುಭವಿಸುವ ಒಂದು ಅಪೂರ್ವ ಅವಕಾಶ.

ಕಾರ್ಯಕ್ರಮದ ವಿಶೇಷತೆ:
• ಯಾರಿಗೆಲ್ಲ ಅವಕಾಶ?: ವಿಜ್ಞಾನ, ಎಂಜಿನಿಯರಿಂಗ್ ಮಾತ್ರವಲ್ಲದೆ ವಿನ್ಯಾಸ (Design), ಮನೋವಿಜ್ಞಾನ ಮತ್ತು ಮಾನವಿಕ ವಿಭಾಗದ ವಿದ್ಯಾರ್ಥಿಗಳೂ ಭಾಗವಹಿಸಬಹುದು.
• ತರಬೇತಿ-ಮಾರ್ಗದರ್ಶನ: ಆಯ್ಕೆಯಾದ ತಂಡಗಳಿಗೆ ವಿಜ್ಞಾನಿಗಳು, ಕಲಾಕಾರರು ಮತ್ತು ವಿದ್ವಾಂಸರಿಂದ ಎರಡು ತಿಂಗಳ ಕಾಲ ಮಾರ್ಗದರ್ಶನ ನೀಡಲಾಗುತ್ತದೆ.
• ಕಲಿಕೆ: ತತ್ವಶಾಸ್ತ್ರದ ವಿಚಾರಗಳನ್ನು ಸೆನ್ಸಾರ್‌ಗಳು, ಎಐ (AI) ಮತ್ತು ಎಂಜಿನಿಯರಿಂಗ್ ಬಳಸಿ ಪ್ರದರ್ಶಿಕೆಗಳಾಗಿ ಮಾಡುವ ಕಲೆ ಇಲ್ಲಿ ಸಿದ್ಧಿಸುತ್ತದೆ.

ಪ್ರಮುಖ ದಿನಾಂಕಗಳು ಮತ್ತು ವಿವರ:
• ನೋಂದಣಿ ಅವಧಿ: ನೋಂದಣಿ ಈಗಾಗಲೇ ಆರಂಭವಾಗಿದ್ದು, ಜನವರಿ 15 ರವರೆಗೆ ಇರಲಿದೆ.
• ತಂಡದ ಮಿತಿ: ಪ್ರತಿ ತಂಡದಲ್ಲಿ ಗರಿಷ್ಠ 5 ಸದಸ್ಯರಿರಬಹುದು.
• ಸ್ಥಳ: ಪರಮ್ ಮೇಕರ್ ಸ್ಪೇಸ್, ಜಯನಗರ, ಬೆಂಗಳೂರು.
• ಓರಿಯಂಟೇಶನ್: ಜನವರಿ 15ರಂದು ನಡೆಯಲಿರುವ ಕಾರ್ಯಾಗಾರ.

ಅಂತಿಮ ಪ್ರದರ್ಶನ:
ಈ ಮೇಕಥಾನ್ನಲ್ಲಿ ತಯಾರಾದ ಅತ್ಯುತ್ತಮ ಮಾದರಿಗಳನ್ನು ಜನವರಿ 29 ರಿಂದ ಫೆಬ್ರುವರಿ 1ರ ವರೆಗೆ ಬೆಂಗಳೂರಿನ ಅರಮನೆ ಮೈದಾನದ (ತ್ರಿಪುರ ವಾಸಿನಿ) ಬೃಹತ್ ವೇದಿಕೆಯಲ್ಲಿ ನಡೆಯುವ ‘ದಕ್ಷಿಣಾಸ್ಯ ದರ್ಶಿನಿ’ ಎಂಬ ಸಾರ್ವಜನಿಕ ಪ್ರದರ್ಶನದಲ್ಲಿ ಪ್ರದರ್ಶಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: vedanta-makeathon@paraminnovation.org

ಕೋಟ್‌: ಯುವಜನತೆಯಲ್ಲಿ ಹೊಸ ಆಲೋಚನೆ ಮತ್ತು ಆತ್ಮವಿಶ್ವಾಸ ಮೂಡಿಸಲು ‘ದಕ್ಷಿಣಾಸ್ಯ ದರ್ಶಿನಿ’ ಒಂದು ಉತ್ತಮ ವೇದಿಕೆ. ವೇದಾಂತದ ಸಾರವನ್ನು ವಿಜ್ಞಾನದ ಪ್ರಯೋಗಗಳ ಮೂಲಕ ಇಲ್ಲಿ ವಿವರಿಸಲಾಗುತ್ತದೆ. ಇಂದಿನ ವೇಗದ ಬದುಕಿನಲ್ಲಿ ಯುವಕರಿಗೆ ತಮ್ಮನ್ನು ತಾವು ಅರಿತುಕೊಳ್ಳುವ ಅನಿವಾರ್ಯತೆ ಇದೆ. ಈ ಪ್ರದರ್ಶನದಿಂದ ಸಿಗುವ ತಿಳಿವಳಿಕೆಯು ಜೀವನದ ಸವಾಲುಗಳನ್ನು ಗೆದ್ದು, ಸುಖ-ಶಾಂತಿಯಿಂದ ಬದುಕಲು ಅವರಿಗೆ ಸಹಾಯ ಮಾಡುತ್ತದೆ.​— ಲಕ್ಷ್ಮೀಶ ಸಿಂಹ,  ಟ್ರಸ್ಟಿ, ವೇದಾಂತ ಭಾರತಿ.

Source: A platform for student creativity: Param & Vedanta Bharati jointly organize `Vedanta Makethon'
Via: A platform for student creativity: Param & Vedanta Bharati jointly organize `Vedanta Makethon'
Tags: #Param & Vedanta Bharati#saakshatv#Vedanta Makethonbengalurukarnataka
ShareTweetSendShare
Join us on:

Related Posts

ಸಂವಿಧಾನದನ್ವಯ ಅಧಿವೇಶನ ಕರೆದಿದ್ದೇವೆ: ಸಿಎಂ ಸಿದ್ದರಾಮಯ್ಯ

ಸಂವಿಧಾನದನ್ವಯ ಅಧಿವೇಶನ ಕರೆದಿದ್ದೇವೆ: ಸಿಎಂ ಸಿದ್ದರಾಮಯ್ಯ

by Shwetha
January 20, 2026
0

ಹೊಸ ವರ್ಷದ ಆರಂಭದಲ್ಲಿ ಜಂಟಿ ಅಧಿವೇಶನವನ್ನು ಕಡ್ಡಾಯವಾಗಿ ಕರೆಯಬೇಕು ಎಂಬುದು ಸಂವಿಧಾನದಲ್ಲಿ ಸ್ಪಷ್ಟವಾಗಿ ಉಲ್ಲೇಖವಾಗಿದೆ. ಅದರ ಅನ್ವಯವೇ ರಾಜ್ಯ ಸರ್ಕಾರ ಈ ವಿಶೇಷ ಅಧಿವೇಶನವನ್ನು ಕರೆದಿದೆ ಎಂದು...

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಚಾಲಕರಹಿತ ಮತ್ತೊಂದು ರೈಲು ಬೆಂಗಳೂರಿಗೆ ಆಗಮನ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಚಾಲಕರಹಿತ ಮತ್ತೊಂದು ರೈಲು ಬೆಂಗಳೂರಿಗೆ ಆಗಮನ

by Shwetha
January 20, 2026
0

ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಸಂತಸದ ಸುದ್ದಿ ಸಿಕ್ಕಿದೆ. ಕೋಲ್ಕತ್ತಾದಿಂದ ಬೆಂಗಳೂರಿಗೆ ಹೊಸ ಚಾಲಕರಹಿತ (ಡ್ರೈವರ್‌ಲೆಸ್) ಮೆಟ್ರೋ ರೈಲು ಆಗಮಿಸಿದ್ದು, ಇದು ಹಳದಿ ಮಾರ್ಗದಲ್ಲಿ ಸಂಚರಿಸಲು ಸಿದ್ಧವಾಗಿದೆ....

GBA ಚುನಾವಣೆ ಬ್ಯಾಲೆಟ್ ಪೇಪರ್‌ನಲ್ಲೇ: EVMಗೆ ಕೊಕ್

GBA ಚುನಾವಣೆ ಬ್ಯಾಲೆಟ್ ಪೇಪರ್‌ನಲ್ಲೇ: EVMಗೆ ಕೊಕ್

by Shwetha
January 20, 2026
0

ಮುಂಬರುವ GBA (ಗ್ರೇಟರ್ ಬೆಂಗಳೂರು ಅಥಾರಿಟಿ) ಚುನಾವಣೆಯನ್ನು ಈ ಬಾರಿ EVM ಯಂತ್ರಗಳಿಲ್ಲದೆ, ಬ್ಯಾಲೆಟ್ ಪೇಪರ್ ಮೂಲಕ ನಡೆಸಲು ರಾಜ್ಯ ಚುನಾವಣಾ ಆಯೋಗ ಮಹತ್ವದ ತೀರ್ಮಾನ ಕೈಗೊಂಡಿದೆ....

ಅಬಕಾರಿ ಸಚಿವ R.B ತಿಮ್ಮಾಪುರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಅಬಕಾರಿ ಸಚಿವ R.B ತಿಮ್ಮಾಪುರ ವಿರುದ್ಧ ಲೋಕಾಯುಕ್ತಕ್ಕೆ ದೂರು

by Shwetha
January 20, 2026
0

ಬಾರ್ ಲೈಸೆನ್ಸ್ ನೀಡುವ ವಿಚಾರದಲ್ಲಿ ಲಂಚ ಕೇಳಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಅಬಕಾರಿ ಸಚಿವ R.B ತಿಮ್ಮಾಪುರ ವಿರುದ್ಧ ಲೋಕಾಯುಕ್ತಕ್ಕೆ ಅಧಿಕೃತ ದೂರು ಸಲ್ಲಿಕೆಯಾಗಿದೆ. ಲಕ್ಷ್ಮೀನಾರಾಯಣ ಎಂಬವರು...

ನಾಲಿಗೆ ಹರಿಬಿಟ್ಟು ಸಂಕಷ್ಟಕ್ಕೆ ಸಿಲುಕಿದ ಶ್ರೀರಾಮುಲು: ಬಾಲಕಿಯ ಗುರುತು ಬಹಿರಂಗಪಡಿಸಿ ಪೋಕ್ಸೊ ಬಲೆಗೆ ಬಿದ್ದ ಮಾಜಿ ಸಚಿವ

ನಾಲಿಗೆ ಹರಿಬಿಟ್ಟು ಸಂಕಷ್ಟಕ್ಕೆ ಸಿಲುಕಿದ ಶ್ರೀರಾಮುಲು: ಬಾಲಕಿಯ ಗುರುತು ಬಹಿರಂಗಪಡಿಸಿ ಪೋಕ್ಸೊ ಬಲೆಗೆ ಬಿದ್ದ ಮಾಜಿ ಸಚಿವ

by Shwetha
January 20, 2026
0

ಬಳ್ಳಾರಿ: ಇರಲಾರದೆ ಇರುವೆ ಬಿಟ್ಕೊಳೋದು ಅಂದ್ರೆ ಇದೆನಾ ಎಂಬಂತಾಗಿದೆ ಮಾಜಿ ಸಚಿವ ಬಿ. ಶ್ರೀರಾಮುಲು ಅವರ ಪರಿಸ್ಥಿತಿ. ರಾಜ್ಯ ರಾಜಕಾರಣದಲ್ಲಿ ಸದಾ ಸುದ್ದಿಯಲ್ಲಿರುವ ಗಣಿ ಜಿಲ್ಲೆ ಬಳ್ಳಾರಿಯಲ್ಲಿ,...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram