ಅತ್ತೆ, ಅಳಿಯನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ.
ಹನುಮನಕೊಂಡ ಜಿಲ್ಲೆಯಲ್ಲಿ ಈ ಭೀಕರ ಘಠನೆ ನಡೆದಿದೆ. ಹಣಕಾಸಿನ ವಹಿವಾಟು ಮತ್ತು ಕೌಟುಂಬಿಕ ಕಲಹದಿಂದಾಗಿ ಪೊಲೀಸ್ ಪೇದೆಯೊಬ್ಬ ತನ್ನ ಅತ್ತೆಯನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾನೆ. ಹನಮಕೊಂಡದ ಗುಂಡ್ಲಸಿಂಗಾರನ ಇಂದಿರಮ್ಮ ಕಾಲನಿಯಲ್ಲಿ ಈ ಘಟನೆ ನಡೆದಿದೆ. ಪ್ರಸಾದ್ ಎಂಬ ಕಾನ್ಸ್ಟೆಬಲ್ ತನ್ನ ರಿವಾಲ್ವರ್ನಿಂದ ಎರಡು ಸುತ್ತು ಗುಂಡು ಹಾರಿಸಿದ್ದಾನೆ. ಹೀಗಾಗಿ ಅತ್ತೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಸ್ಥಳೀಯರು, ಪೇದೆ ಹಿಡಿದು ಥಳಿಸಿದ್ದಾರೆ. ಆ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.
ದಾಳಿ ನಡೆಸಿರುವ ಪ್ರಸಾದ್, ರಾಮಗುಂಡಂ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ತೋಟಪಲ್ಲಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ. 15 ವರ್ಷಗಳ ಹಿಂದೆ ಗುಂಡ್ಲ ಸಿಂಗಾರಂ ಪ್ರದೇಶದ ರಮ ಎಂಬ ಮಹಿಳೆಯೊಂದಿಗೆ ಪ್ರಸಾದ್ ವಿವಾಹವಾಗಿದ್ದ. ಈ ದಂಪತಿಗೆ ಇಬ್ಬರು ಪುತ್ರಿಯರು ಇದ್ದಾರೆ. ಕೆಲ ದಿನಗಳಿಂದ ಪತಿ-ಪತ್ನಿಯರ ನಡುವೆ ಜಗಳ ನಡೆಯುತ್ತಿತ್ತು. ಹೀಗಾಗಿ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದರು.
ಪ್ರಸಾದ್ ಗುಲ್ಲಸಿಂಗಾರ್ ನಲ್ಲಿರುವ ತನ್ನ ಅತ್ತೆ ಮನೆಗೆ ಹೋಗಿ, ತನ್ನ ಹಣ ವಾಪಸ್ ನೀಡುವಂತೆ ಕೇಳಿದ್ದಾನೆ. ಈ ವೇಳೆ ಅತ್ತೆ ಮತ್ತು ಅಳಿಯನ ನಡುವೆ ವಾಗ್ವಾದ ನಡೆದಿದೆ. ಆ ಸಂದರ್ಭದಲ್ಲಿ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ.