ಮನೆಯಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಯ (couple) ಕೊಲೆ ಮಾಡಿರುವ ಘಟನೆಯೊಂದು ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಈ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮಾವನೂರ ಗ್ರಾಮದಲ್ಲಿ ನಡೆದಿದ್ದು, ಜೇಂದ್ರ ವಣ್ಣೂರೆ(60), ಪತಿ ದ್ರಾಕ್ಷಾಯಿಣಿ ವಣ್ಣೂರೆ(48) ಮೃತರು. ಜುಲೈ 7ರ ಮಧ್ಯರಾತ್ರಿ ಮನೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.
ಬೆಳಿಗ್ಗೆ ಬಾಗಿಲು ತೆರೆಯದ ಹಿನ್ನೆಲೆಯ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಗಿಲು ತೆರೆದು ನೋಡಿದಾಗ ದಂಪತಿ ಕೊಲೆ ಆಗಿರುವುದು ಬೆಳಕಿಗೆ ಬಂದಿದೆ. ಕೇಸ್ ದಾಖಲಿಸಿ ಕೊಲೆ ಆರೋಪಿಗಳಿಗಾಗಿ ಯಮಕನಮರಡಿ ಪೊಲೀಸ್ರು ಹುಡುಕಾಟ ಆರಂಭಿಸಿದ್ದಾರೆ.