ಬೆಂಗಳೂರು : ಜನಾಂಗೀಯ ನಿಂದನೆ ಮಾಡಿ ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.
ಸಿಕ್ಕಿಂ ಯುವಕನೊಬ್ಬನನ್ನು ಚೀನಿ ಎಂದು ಭಾವಿಸಿ ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ದಿನೇಶ್ ಸುಬ್ಬಾ ಎಂಬವರ ಮೇಲೆ ಮೂರು ಜನ ಅಪರಿಚಿತರು ‘ಚೀನೀ’ ಎಂದು ಕರೆದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ದಿನೇಶ್ ಹೋಟೆಲ್ನಲ್ಲಿ ವೇಟರ್ ಆಗಿ ಕೆಲಸ ಮಾಡುತ್ತಿದ್ದ. ಆಗಸ್ಟ್ 16ರಂದು ಸಹೋದರ ಹಾಗೂ ಸ್ನೇಹಿತನೊಂದಿಗೆ ಊಟ ಮಾಡಿಕೊಂಡು ಮರಳಿ ಹೋಗುವಾಗ ಬೈಕ್ ನಲ್ಲಿ ಬಂದಿದ್ದ ಮೂವರು ವ್ಯಕ್ತಿಗಳು ಇರಿದು ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದಾಗಿ ತಲೆ ಹಾಗೂ ಮುಖಕ್ಕೆ ಗಾಯಗಳಾಗಿವೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.