ಆಸ್ತಿಗಾಗಿ ತಂಗಿಗೆ ಬೆಂಕಿ ಹಚ್ಚಿ ಕೊಂದ ಅಕ್ಕ Saaksha Tv
ತೆಲಂಗಾಣ: ರಾಜೇಶ್ವರಿ ಎಂಬಾಕೆ ಆಸ್ತಿಗಾಗಿ ತನ್ನ ಸಹೋದರಿಗೆ ಬೆಂಕಿ ಹಚ್ಚಿ ಕೊಂದಿರುವ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯ ವಾಡಿಯಾರಾಮ್ ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆ ಹೆಸರು ವರಲಕ್ಷ್ಮೀ (36) ಎಂದು ತಿಳಿದು ಬಂದಿದೆ. ಸೋಮವಾರ ಸಂಜೆ ರಾಜೇಶ್ವರಿ ತನ್ನ ಸೋದರಿ ವರಲಕ್ಷ್ಮೀ ಮನೆಗೆ ಜಮೀನು ವಿಚಾರ ಚರ್ಚಿಸುವ ಸಲುವಾಗಿ ಬಂದಿದ್ದರು, ರಾಜೇಶ್ವರಿ ಬರುವಾಗ ಕೈಯಲ್ಲಿ ಪೆಟ್ರೋಲ್ ಬಾಟಲಿ ಹಿಡಿದುಕೊಂಡು ಬಂದಿದ್ದಳು.
ಮಾತುಕತೆ ತಾರಕಕ್ಕೆ ಏರಿ ಜಗಳಕ್ಕೆ ತಿರುಗಿದ್ದು, ರಾಜೇಶ್ವರಿ ತನ್ನ ಅಕ್ಕನ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ತೀವ್ರವಾಗಿ ಗಾಯಗೊಂಡ ವರಲಕ್ಷ್ಮಿಯನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಅವರು ಬದುಕುಳಿಯಲಿಲ್ಲ. ಇನ್ನೂ ಇತ್ತ ರಾಜೇಶ್ವರಿ ಕೂಡ ಸುಟ್ಟುಕೊಂಡಿದ್ದಾರೆ. ಶೇ.80ರಷ್ಟು ಸುಟ್ಟುಕೊಂಡಿರುವ ಈಕೆ ಕೂಡ ಬದುಕುವ ಸಾಧ್ಯತೆ ಕಡಿಮೆಯೇ ಇದೆ ಎಂದು ವೈದ್ಯರು ತಿಳಿಸಿದ್ದಾರೆ.
ವರಲಕ್ಷ್ಮೀ ಎಂಬಾಕೆ ವಾಡಿಯಾರಾಮ್ ಗ್ರಾಮದಲ್ಲಿ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು. ಆಕೆಯ ಪತಿ ಕೆಲವು ವರ್ಷಗಳ ಹಿಂದೆಯೇ ದೂರಾವಾಗಿದ್ದಾರೆ. ಈಕೆಗೆ ರಾಜೇಶ್ವರಿ ಎಂಬ ತಂಗಿ ಇದ್ದು, ಅವಳೂ ವಿಚ್ಛೇದಿತಳು. ಇವರಿಬ್ಬರೂ ಸ್ವಂತ ಅಕ್ಕ-ತಂಗಿಯರಾಗಿದ್ದು, ಕಾಮರೆಡ್ಡಿ ಜಿಲ್ಲೆಯಲ್ಲಿ ತವರು ಮನೆಯಿದೆ. ಈ ಸಹೋದರಿಯರ ಪಾಲಕರ ಬಳಿ 5 ಎಕರೆಗಳಷ್ಟು ಭೂಮಿ ಇದ್ದು, ಆ ಐದು ಎಕರೆ ಭೂಮಿ ಹಂಚಿಕೊಳ್ಳುವ ಸಂಬಂಧ ವರಲಕ್ಷ್ಮೀ ಮತ್ತು ರಾಜೇಶ್ವರಿ ಮಧ್ಯೆ ವಿದಾದ ಇತ್ತು ಎಂದು ಚೆಗುಂಟಾ ಪೊಲೀಸರು ತಿಳಿಸಿದ್ದಾರೆ.








