ಬೆಂಗಳೂರು: ಬಿಎಂಟಿಸಿ ಬಸ್ ಗೆ (BMTC Bus Accident) ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ.
ಈ ಘಟನೆ ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ನಡೆದಿದೆ. ಯಶವಂತಪುರದಿಂದ ಬಸ್ ಮೆಜೆಸ್ಟಿಕ್ ಗೆ ಬರುತ್ತಿದ್ದ ಸಂದರ್ಭದಲ್ಲಿ ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣದ (Majestic Bus Stop) ಎಂಟ್ರಿ ಗೇಟ್ ಹತ್ತಿರ ಈ ದುರ್ಘಟನೆ ಸಂಭವಿಸಿದೆ. ಅತಿಯಾದ ವೇಗವೇ ಈ ದುರ್ಘಟನೆಗೆ ಕಾರಣ ಎನ್ನಲಾಗುತ್ತಿದೆ. ಬಸ್ ವೇಗವಾಗಿ ಗುದ್ದಿ ಮುಂದೆ ಸಾಗಿದೆ. ಅಲ್ಲಿದ್ದವರು ಚೀರುತ್ತಿದ್ದಂತೆ ಈ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಆನಂತರ ಚಾಲಕ ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ, ಚಾಲಕ ಗೋಪಾಲಯ್ಯನನ್ನ ಉಪ್ಪಾರಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.