ಅಲ್ಲು ಅರ್ಜುನ್ ಮನೆಯ ಮೇಲೆ ದಾಳಿ ಪ್ರಕರಣ; 6 ಜನರಿಗೆ ಜಾಮೀನು
ನಟ ಅಲ್ಲು ಅರ್ಜುನ್ (Allu Arjun) ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಅವರ ಮನೆಯ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರನ್ನು ಬಂಧಿಸಲಾಗಿತ್ತು. ಈಗ ಬಂಧಿತರಿಗೆ ಜಾಮೀನು ಸಿಕ್ಕಿದೆ.
ಆರು ಜನ ದಾಳಿಕೋರರನ್ನು ಬಂಧಿಸಿದ್ದ ಜ್ಯುಬ್ಲಿ ಹಿಲ್ಸ್ ಪೊಲೀಸರು, ಕೋರ್ಟ್ ಮುಂದೆ ಹಾಜರುಪಡಿಸಿದ್ದರು. 6 ಆರೋಪಿಗಳಿಗೆ ತಲಾ 10 ಸಾವಿರ ರೂ. ವೈಯಕ್ತಿಕ ಬಾಂಡ್ ಮೇಲೆ ಕೋರ್ಟ್, ಜಾಮೀನು ಮಂಜೂರು ಮಾಡಿದೆ.
ಠಾಣೆಯಲ್ಲಿ ಆರೋಪಿಗಳೆಲ್ಲಾ ಬೆಂಚ್ ಮೇಲೆ ಕುಳಿತು ಮೊಬೈಲ್ ನಲ್ಲಿ ಮುಳುಗಿದ್ದ ದೃಶ್ಯಗಳು ವೈರಲ್ ಆಗಿದ್ದವು. ಈ ವಿಷಯ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದವು. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು. ಸದ್ಯ ಈ ವಿಷಯವಾಗಿಯೇ ಈಗ ತೆಲಂಗಾಣದಲ್ಲಿ ಹಗ್ಗ ಜಗ್ಗಾಟ ನಡೆಯುತ್ತಿದೆ.
ಸ್ಯಾಂಡಲ್ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್ಷಾ ಕಿಚ್ಚ ಸುದೀಪ್
ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ವಾಹನ ಪ್ರೇಮ ಇಡೀ ದೇಶಕ್ಕೇ ಗೊತ್ತು. ಅವರ ಬಳಿ ಇರುವ ಐಷಾರಾಮಿ ಕಾರುಗಳ ಸಾಲಿಗೆ ಈಗ ವಿಮಾನದಂತಹ...








