ಭೂಪಾಲ್: ವಿದ್ಯಾರ್ಥಿಯೊಬ್ಬ ಪ್ರಿನ್ಸಿಪಾಲರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಮಧ್ಯಪ್ರದೇಶದ (Madhya Pradesh) ಛತ್ತರ್ ಪುರದಲ್ಲಿ ನಡೆದಿದೆ. ತರಗತಿಗೆ ಸರಿಯಾಗಿ ಬರುತ್ತಿಲ್ಲ ಎಂದು ಪೋಷಕರನ್ನು ಕರೆಯಿಸಿ ಬುದ್ಧಿ ಹೇಳಿದ್ದಕ್ಕೆ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ಸುರೇಂದ್ರ ಕುಮಾರ್ ಸಕ್ಸೇನಾ ಹತ್ಯೆಯಾದ ಪ್ರಿನ್ಸಿಪಾಲ್ ಎನ್ನಲಾಗಿದೆ. ವಿದ್ಯಾರ್ಥಿಯು ಸರಿಯಾಗಿ ಶಾಲೆಗೆ ಬರುತ್ತಿಲ್ಲ ಎಂದು ಪ್ರಿನ್ಸಿಪಾಲರು ಬುದ್ಧಿ ಹೇಳಿದ್ದರು. ಇದರಿಂದ ಕೋಪಗೊಂಡ ವಿದ್ಯಾರ್ಥಿ ಶಾಲೆಗೆ ನುಗ್ಗಿ ಶೌಚಾಲಯದಲ್ಲಿದ್ದ ಪ್ರಾಂಶುಪಾಲರ ತಲೆಗೆ ಗುಂಡು ಹಾರಿಸಿದ್ದಾನೆ. ಆದರೆ, ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಾಲೇಜಿನಲ್ಲಿ ಅಳವಡಿಸಲಾದ ಸಿಸಿಟಿವಿಯಲ್ಲಿ ಆರೋಪಿಗಳ ಕೃತ್ಯ ಸೆರೆಯಾಗಿದೆ. ಹತ್ಯೆಯ ನಂತರ ಆರೋಪಿ ಹಾಗೂ ಆತನ ಸ್ನೇಹಿತ ಪರಾರಿಯಾಗಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.








