ಪಿಯುಸಿ ಪರೀಕ್ಷೆಗೆ ಗೈರಾದ ಹಿಜಾಬ್ ಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ವಿದ್ಯರ್ಥಿನಿಯರು
ಉಡುಪಿ: ಹಿಜಾಬ್ ಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ವಿದ್ಯರ್ಥಿನಿಯರು, ಇಂದು ಕೂಡ (ಶನಿವಾರ) ಕೂಡಾ ಪಿಯುಸಿ ಪರೀಕ್ಷೆಗೆ ಗೈರಾಗಿದ್ದಾರೆ.
ಈಗಾಗಲೇ ಹೈಕೋರ್ಟ್ ಶಾಲಾ-ಕಾಲೇಜುಗಳಿಗೆ ಹಿಜಾಬ್ ಧರಿಸದಂತೆ ಈಗಾಗಲೇ ಹೈಕೋರ್ಟ್ ತೀರ್ಪು ನೀಡಿದೆ. ಶಿಕ್ಷಣ ಇಲಾಖೆ ಕೂಡಾ ಹಿಜಾಬ್ ಧರಿಸಿ ಬರುವ ವಿದ್ಯಾರ್ಥನಿಯರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲ್ಲ ಅಂತ ತಿಳಿಸಿದೆ. ಆದರೂ ಕೂಡ ವಿದ್ಯಾರ್ಥನಿಯರು ನಿನ್ನೆ ಪರೀಕ್ಷೆಗೆ ಹಿಜಾಬ್ ಧರಿಸಿಕೊಂಡು ಬಂದಿದ್ದರು.
ಹಿಜಾಬ್ ಧರಿಸಿ ಬಂದ ವಿದ್ಯಾರ್ಥನಿಯರು ಹಿಜಾಬ್ ಧರಿಸಿಕೊಂಡೆ ಪರೀಕ್ಷೆ ಬರೆಯಲು ಅವಕಾಶ ನೀಡಿ ಎಂದು ಮನವಿ ಮಾಡಿದರು. ಆದರೆ ಇದಕ್ಕೆ ಅವಕಾಶ ಸಿಗದ ಹಿನ್ನಲೆ ಪರೀಕ್ಷೆ ಬರೆಯದೇ ತಿರುಗಿ ಹೋಗಿದ್ದರು. ಇಂದು ಗಣಿತ ಪರೀಕ್ಷೆ ನಡೆಯುತ್ತಿದೆ.
ಆದರೆ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗಿದ್ದಾರೆ. ಅಲ್ಮಾಸ್, ಹಜ್ರಾ, ಆಯೇಷಾ ಪರೀಕ್ಷೆಗೆ ಗೈರಾಗಿದ್ದಾರೆ. ಅಲ್ಮಾಸ್ ಹಾಲ್ ಟಿಕೆಟ್ ಪಡೆದು ಪರೀಕ್ಷೆಗೆ ಗೈರಾಗಿದ್ದಾರೆ. ಇನ್ನೂ ಹಜ್ರಾ, ಆಯೇಷಾ ಹಾಲ್ ಟಿಕೆಟ್ ಪಡೆಯುವುದಕ್ಕೂ ಬಂದಿಲ್ಲ.
ನಿನ್ನೆ ಹಿಜಾಬ್ ಧರಿಸಿ ಬಂದಿದಕ್ಕೆ ಅಲಿಯಾ, ರೇಷಂಗೆ ಪರೀಕ್ಷೆ ಬರೆಯಲು ಅವಕಾಶ ನೀಡಿಲಿಲ್ಲ. ಈ ಇಬ್ಬರು ವಿದ್ಯಾರ್ಥನಿಯರು ಭಾರಿ ಟೀಕೆಗೆ ಒಳಗಾಗಿದ್ದಾರೆ.