ಜೈಪುರ: ಬಸ್ ನಿಯಂತ್ರಣ ತಪ್ಪಿ ರೈಲು ಹಳಿಯ ಮೇಲೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿ,ಹಲವಾರು ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ರಾಜಸ್ಥಾನದ ದೌಸಾ (Rajasthan Dausa) ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಮಧ್ಯರಾತ್ರಿಯ ವೇಳೆ ಮೇಲ್ಸೇತುವೆಯಿಂದ ದೌಸಾದ ರೈಲ್ವೆ ಹಳಿ ಮೇಲೆ ನಡೆದಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿ, 30ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಸ್ ಬಸ್ ಹರಿದ್ವಾರದಿಂದ (Haridwar) ಉದಯಪುರಕ್ಕೆ ತೆರಳುತ್ತಿತ್ತು.
ಗಾಯಾಳುಗಳನ್ನು ಆಸ್ಪತ್ರೆಯಲ್ಲಿ (Hospital) ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಹೆಚ್ಚುವರಿ ತನಿಖೆ ನಡೆಸಲಾಗುತ್ತಿದೆ ಎಂದು ದೌಸಾದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜ್ಕುಮಾರ್ ಕಸ್ವಾ ಹೇಳಿದ್ದಾರೆ.