ನವದೆಹಲಿ: ದೆಹಲಿಯ ಅಲಿಪುರದ ದಯಾಲ್ ಪುರ ಮಾರುಕಟ್ಟೆಯಲ್ಲಿನ ಪೇಂಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 11 ಜನ ಬಲಿಯಾಗಿದ್ದಾರೆ.
ಅಲ್ಲದೇ, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆ ಸಂದರ್ಭದಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಕೂಡ ಗಾಯಗೊಂಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ 22 ಅಗ್ನಿ ಶಾಮಕ ವಾಹನಗಳು ತೆರಳಿ ರಕ್ಷಣಾ ಕಾರ್ಯ ನಡೆಸಿವೆ.
ಫ್ಯಾಕ್ಟರಿ ಒಳಗಿನ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.