ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ ಮೂರನೇ ಶಕ್ತಿ ಹುಟ್ಟುತ್ತದೆ ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ಹೇಳಿದ್ದಾರೆ.
ಚುನಾವಣೆ ನಂತರ ರಾಜ್ಯದಲ್ಲಿ ಮಠಾಧೀಶರು, ದಲಿತರು, ಮುಸ್ಲಿಂರ ಮೂರನೇ ಶಕ್ತಿ ಉದಯವಾಗುತ್ತದೆ. ಒಬ್ಬರು ಬ್ರಹ್ಮಾಚಾರಿಗೆ ಶಕ್ತಿ ಕೊಡುತ್ತೇವೆ. ಮುಂದೆ ಕರ್ನಾಟಕದಲ್ಲಿ ಮೂರನೇ ಶಕ್ತಿ ಹೊಸ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರಲಿದೆ. ಈ ವಿಷಯವಾಗಿ ಈಗಾಗಲೇ ನಾನು ದಿಂಗಾಲೇಶ್ವರ ಸ್ವಾಮೀಜಿ ಜೊತೆ ಮಾತುಕತೆ ನಡೆಸಿರುವುದಾಗಿ ಕೂಡ ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮಾಡಿದ ಹಲವಾರು ತಪ್ಪಿನಿಂದಾಗಿ ಬಿಜೆಪಿ ಬೆಳೆಯುವಂತೆ ಆಗಿದೆ. ಹೀಗಾಗಿ ರಾಜ್ಯದಲ್ಲಿ ಬಸವ ತತ್ವದ ಮೇಲೆ ಸಂಘಟನೆ ಬೆಳೆಯುವ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿಯೇ ಚಿಂತನೆ ನಡೆದಿದೆ. ಈಗಾಗಲೇ ನಾವೆಲ್ಲ ಕೂತು ತೀರ್ಮಾನಿಸಿದ್ದೇವೆ. ದಿಂಗಾಲೇಶ್ವರ ಸ್ವಾಮೀಜಿ ಕೆಲವೇ ದಿನಗಳಲ್ಲಿ ಈ ಕುರಿತು ಹೇಳುತ್ತಾರೆ ಎಂದು ಸ್ಪೋಟಕ ಮಾಹಿತಿಯನ್ನು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಕುಮಾರಸ್ವಾಮಿ ವಿರುದ್ಧ ಗುಡುಗಿದ ಅವರು, ಜೆಡಿಎಸ್ ಮುಸ್ಲಿಂ ರ ವೋಟ್ ಪಡೆದು 17 ಸೀಟ್ ಗೆದ್ದಿದ್ದು ನನ್ನಿಂದ. ಈ ಪಕ್ಷಕ್ಕೆ ಮತಿಯೇ ಇಲ್ಲ. ಹಾಸನ, ಮಂಡ್ಯದಲ್ಲಿ ಗೆಲ್ಲಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.