CM ನಿತೀಶ್ ಕುಮಾರ್ ಬೆಂಗಾವಲು ಪಡೆಯ ವಾಹನಗಳ ಮೇಲೆ ಕಲ್ಲೂ ತೂರಾಟ..
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ಪಡೆಯ ವಾಹನಗಳ ಮೇಲೆ ಜನರು ಕಲ್ಲುಗಳಿಂದ ದಾಳಿ ನಡೆಸಿದ್ದು, ವಾಹನಗಳ ಗಾಜುಗಳನ್ನು ಪುಡಿಗಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 13 ಮಂದಿಯನ್ನ ಬಂಧಿಸಲಾಗಿದೆ ಎಂದು ಪಾಟ್ನಾ ಪೊಲೀಸರು ತಿಳಿಸಿದ್ದಾರೆ.
ಭಾನುವಾರ ಸಂಜೆ 5 ಗಂಟೆಗೆ ಈ ಘಟನೆ ನಡೆದಿದೆ. ಪಾಟ್ನಾ ಜಿಲ್ಲೆಯ ಸೋಹ್ಗಿ ಎಂಬಲ್ಲಿ ಕಳೆದ ಒಂದು ವಾರದ ಹಿಂದೆ ನಾಪತ್ತೆಯಾದ ಯುವಕನ ಶವ ಬೇರ್ ಎಂಬಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆಕ್ರೋಶಿತರಾದ ಗ್ರಾಮಸ್ಥರು ಗೌರಿಚಕ್ನ ಸೊಹ್ಗಿ ಬಳಿ ಪಾಟ್ನಾ-ಗಯಾ ಮುಖ್ಯ ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದರು.
ಇದೇ ವೇಳೆ CM ಬೆಂಗಾವಲು ಪಡೆಯ ವಾಹನಗಳು ಪ್ರದೇಶದಲ್ಲಿ ಬಂದಿವೆ. ಬೆಂಗಾವಲು ಪಡೆಯ ವಾಹನಗಳನ್ನು ಕಂಡ ತಕ್ಷಣ ಗ್ರಾಮಸ್ಥರು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆ ವೇಳೆ ನಿತೀಶ್ ಕುಮಾರ್ ಆ ಮಾರ್ಗದಲ್ಲಿ ಸಂಚರಿಸುತ್ತಾ ಇರಲಿಲ್ಲ ಎನ್ನಲಾಗಿದೆ.