ಮಡಿಕೇರಿ; ಜಲಪಾತಕ್ಕೆ ಬಿದ್ದು ಪ್ರವಾಸಿಗ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇಲಾವರ ಜಲಪಾತದಲ್ಲಿ ಈ ಘಟನೆ ಸಂಭವಿಸಿದೆ. ಪ್ರವಾಸಿಗರೊಬ್ಬರು ಈಜುವುದಕ್ಕಾಗಿ ನೀರಿಗೆ ಇಳಿದಿದ್ದರು. ಆದರೆ, ನೀರಿನ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕೇರಳ ರಾಜ್ಯದ ಮಟ್ಟನೂರು ನಿವಾಸಿ ರಶೀದ್ (27) ಸಾವನ್ನಪ್ಪಿದ ಯುವಕ. ಇಬ್ಬರು ಯುವಕರು ಹಾಗೂ ಇಬ್ಬರು ಯುವತಿಯರು ಮಟ್ಟನೂರಿನಿಂದ ಕೊಡಗು ಪ್ರವಾಸಕ್ಕೆ ಆಗಮಿಸಿದ್ದರು. ಈ ವೇಳೆ ರಶೀದ್ ನೀರಿಗೆ ಇಳಿದಿದ್ದಾನೆ. ಆದರೆ, ಈಜು ಬಾರದ ಹಿನ್ನೆಲೆಯಲ್ಲಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಯುವಕ ಮುಳಗುತ್ತಿದ್ದಂತೆ ತಕ್ಷಣವೇ ಸ್ಥಳೀಯರಿಗೆ ಮಾಹಿತಿ ನೀಡಲಾಯಿತಾದರೂ ರಶೀದ್ ನನ್ನು ಉಳಿಸಲು ಆಗಲಿಲ್ಲ. ಸದ್ಯ ಮೃತದೇಹವನ್ನು ಮೇಲಕ್ಕೆತ್ತಲಾಗಿದ್ದು, ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.