ತುಮಕೂರು : ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ನರಸೀಪುರ ಗ್ರಾಮದಲ್ಲಿ ನಡೆದಿದೆ.
ಕಲಾವತಿ(26) ಸಾವನ್ನಪ್ಪಿದ ಮಹಿಳೆ. ಪತಿಯ ಮೇಲೆ ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಆತನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಆತನೇ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.
ಮನೆ ಪಕ್ಕದ ಶೆಡ್ನಲ್ಲಿ ಸೋಮಶೇಖರ್ ಅನ್ಯ ಸ್ತ್ರೀಯನ್ನು ತಂದಿಟ್ಟುಕೊಂಡಿದ್ದ ಎಂದು ಆರೋಪಿಸಿದ್ದಾರೆ. ಹೀಗಾಗಿ ಇಬ್ಬರ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಹೀಗಾಗಿ ಆತನೇ ಬಾವಿಗೆ ತಳ್ಳಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.
ಇನ್ನೊಂದೆಡೆ ಪತ್ನಿಯ ಅಂತ್ಯ ಸಂಸ್ಕಾರಕ್ಕೆ ಪತಿ ಸೋಮಶೇಖರ್ ಬಂದಿಲ್ಲ. ಹೀಗಾಗಿ ಕೂಡ ಹಲವಾರು ಶಂಕೆ ವ್ಯಕ್ತವಾಗುತ್ತಿದೆ.