ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಆಂದ್ರಪ್ರದೇಶದ ಶ್ರೀಹರಿಕೋಟಾ ಸತೀಶ್ ಧವನ್ ಉಪಗ್ರಹ ಉಡಾವಣಾ ಕೇಂದ್ರದಿಂದ ಉಡಾವಣೆಗೊಂಡು ಚಂದ್ರನ ಕಕ್ಷೆಯನ್ನು ಯಶಸ್ವಿಯಾಗಿ ಸೇರಿದೆ.
ಇನ್ನು ಈ ಚಂದ್ರಯಾನ- 3 ರ Chandrayaana 3 ತಂಡದಲ್ಲಿ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ವಿಜ್ಞಾನಿಯೊಬ್ಬರು ಇರುವುದು ಹೆಮ್ಮೆಯ ಸಂಗತಿ.
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪಟ್ಟಣದ ಕೇಶವಮೂರ್ತಿ ಮತ್ತು ಮಂಗಳ ದಂಪತಿ ಪುತ್ರಿ ಡಾ. ಕೆ.ನಂದಿನಿ ಚಂದ್ರಯಾನ-3ನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.
ಡಾ.ನಂದಿನಿ ಕಳೆದ 8 ವರ್ಷಗಳಿಂದ ಇಸ್ರೋ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಇವರು 2019ರ ಚಂದ್ರಯಾನ 2ರ ತಂಡದಲ್ಲೂ ಭಾಗವಹಿಸಿದ್ದು, ಸತತ ಎರಡನೇ ಬಾರಿಯೂ ಕಾರ್ಯನಿರ್ವಹಿಸಿ ಬಾಳೆಹೊನ್ನೂರಿಗೆ ಕೀರ್ತಿ ತಂದಿದ್ದಾರೆ.
ಇವರು ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಬಾಳೆಹೊನ್ನೂರಿನ ನಿರ್ಮಲಾ ಕಾನ್ವೆಂಟ್ನಲ್ಲಿ ಮುಗಿಸಿ, ನಂತರ 12ನೇ ತರಗತಿಯವರೆಗೆ ಸೀಗೋಡು ಜವಾಹರ್ ನವೋದಯ ವಿದ್ಯಾಲಯ ದಲ್ಲಿ ವ್ಯಾಸಂಗ ಮಾಡಿದ್ದಾರೆ. ಮೂಡಬಿದ್ರೆಯ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಬಿಎಸ್ಸಿ, ಎಂಎಸ್ಸಿ ಪದವಿಧರರಾದರು. ನಂತರ ನ್ಯಾಶನಲ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಸುರತ್ಕಲ್ನಲ್ಲಿ ಪೂರೈಸಿದ್ದಾರೆ. ಇದೇ ಸಂಸ್ಥೆಯಲ್ಲಿ 5 ವರ್ಷಗಳ ಪಿಎಚ್ಡಿ ಪೂರೈಸಿದ್ದಾರೆ. ಇದೀಗ ಇಸ್ರೋದಲ್ಲಿ ಉದ್ಯೋಗದಲ್ಲಿದ್ದಾರೆ.