ಚಿತ್ರದುರ್ಗ: ಮೊಬೈಲ್ ಕೊಡಿಸಿಲ್ಲವೆಂಬ ಕಾರಣಕ್ಕೆ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕೊಳಾಲ್ ಗ್ರಾಮದಲ್ಲಿ ನಡೆದಿದ್ದು, ಅಜ್ಜ ಮೊಬೈಲ್ ಕೊಡಿಸಿಲ್ಲವೆಂದು ಯಶವಂತ್ (20) ಆತ್ಮಹತ್ಯೆಗೆ ಶರಣಾಗಿದ್ದಾನೆ. ಇತ್ತೀಚೆಗೆ ನಡೆದಿದ್ದ ಗಣಪತಿ ಶೋಭಾಯಾತ್ರೆಯಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ವೇಳೆ ಮೊಬೈಲ್ ಕಳೆದುಕೊಂಡಿದ್ದ.
ಹೀಗಾಗಿ ಅಜ್ಜ ಮತ್ತೊಂದು ಮೊಬೈಲ್ ಕೊಡಿಸುವುದಾಗಿ ಹೇಳಿದ್ದರು. ಆದರೆ, ಅಜ್ಜ ಈರುಳ್ಳಿ ಬೆಳೆ ಬಂದಾಗ ಕೊಡಿಸುವುದಾಗಿ ಹೇಳಿದ್ದಾರೆ. ಆದರೆ, ಮೊಬೈಲ್ ಕೊಡಿಸಿಲ್ಲವೆಂಬ ಕಾರಣಕ್ಕೆ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಕುರಿತು ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.