ಚಿಕ್ಕಮಗಳೂರು: ಯುವಕನೊಬ್ಬ ಉದ್ಯೋಗದ ಆಸೆಗೆ ಬಿದ್ದು, ಕಾಂಬೋಡಿಯಾದಲ್ಲಿ ಸಿಲುಕಿರುವ ಘಟನೆಯೊಂದು ನಡೆದಿದೆ.
ಜಿಲ್ಲೆಯ ಎನ್ಆರ್ಪುರ ತಾಲೂಕಿನ ಬಾಳೆಹೊನ್ನೂರು ಹತ್ತಿರದ ಮಾಗುಂಡಿ ಯುವಕ ಅಶೋಕ್ನನ್ನು ಭಾರತೀಯ ರಾಯಭಾರಿ ಕಚೇರಿಯ (Indian Embassy) ಸಿಬ್ಬಂದಿ ರಕ್ಷಿಸಿದೆ. ಹೀಗಾಗಿ ಭಾರತಕ್ಕೆ ಮರಳಿ ಕರೆತರುವ ಪ್ರಕ್ರಿಯೆ ಆರಂಭವಾಗಿದೆ.
ಚೀನಿ ಆಫ್ ಮಾಫಿಯಾಕ್ಕೆ ಸಿಲುಕಿದ್ದ ಯುವಕ ಕಳೆದ ಮೂರು ತಿಂಗಳ ಹಿಂದೆ ಕಾಂಬೋಡಿಯಾಕ್ಕೆ ಹೋಗಿದ್ದ. ವಂಚನೆಯ ಟಾರ್ಗೆಟ್ ನೀಡುತ್ತಿದ್ದ ಚೀನಿ ಆಪ್ ಕಂಪನಿ ಟಾರ್ಗೆಟ್ ಪೂರ್ಣ ಮಾಡದ ಹಿನ್ನೆಲೆಯಲ್ಲಿ ಅಶೋಕ್ ಗೆ ಚಿತ್ರಹಿಂಸೆ ಮಾಡಿತ್ತು. ಅಲ್ಲದೇ, ಆತನನ್ನು ಬಂಧನದಲ್ಲಿಟ್ಟು, 13 ಲಕ್ಷ ರೂ. ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಹೀಗಾಗಿ ದೂರು ನೀಡಿದ್ದ ಕುಟುಂಬಸ್ಥರು, ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು.