ಯುವಕನೊಬ್ಬ ತೃತೀಯ ಲಿಂಗಿಯ ಪ್ರೇಮ ಪಾಶಕ್ಕೆ ಬಿದ್ದಿದ್ದು, ಸದ್ಯ ಪೊಲೀಸರ ಮೊರೆ ಹೋಗಿದ್ದಾರೆ. ಆದರೆ, ದೇಶದಲ್ಲಿ ಸಲಿಂಗ ವಿವಾಹಗಳನ್ನು ಸುಪ್ರೀಂ ಕೋರ್ಟ್ ನಿಷೇಧಿಸಿದ್ದು, ಪೊಲೀಸರು ಕೂಡ ಮೌನವಾಗಿದ್ದಾರೆ ಎನ್ನಲಾಗುತ್ತಿದೆ.
ನ್ಯಾಯಾಲಯದ ಇತ್ತೀಚಿನ ತೀರ್ಪಿನ ನಂತರ, ಸಲಿಂಗ ದಂಪತಿಯ ವಿವಾಹಕ್ಕೆ ಕಾನೂನು ಮಾನ್ಯತೆ ಇಲ್ಲ. ಆದರೆ, ತೆಲಂಗಾಣದಲ್ಲಿ ಯುವಕನೊಬ್ಬ ತೃತೀಯಲಿಂಗಿಯೊಬ್ಬಳನ್ನು ಪ್ರೀತಿಸಿದ್ದಾನೆ. ಇವರಿಬ್ಬರೂ ಮದುವೆಯಾಗಿದ್ದಾರೆ ಎನ್ನಲಾಗಿದ್ದು, ಪೊಲೀಸರ ರಕ್ಷಣೆ (Protection) ಕೋರಿದ್ದಾರೆ.
ಖಮ್ಮಮ್ನ ಗಣೇಶ್ ಎಂಬ ವ್ಯಕ್ತಿ ಆಂಧ್ರಪ್ರದೇಶದ ನಂದಿಗಾಮದ ಲಿಂಗಮಾರ್ಪಡಿಸಿಕೊಂಡ ದೀಪು ಎಂಬುವಳೊಂದಿಗೆ ಮದುವೆಯಾಗಿದ್ದಾನೆ ಎನ್ನಲಾಗಿದೆ. ಮದುವೆಗೆ ಮನೆಯವರು ವಿರೋಧ ಮಾಡಿದ್ದರಿಂದಾಗಿ ಈ ಜೋಡಿ ರಕ್ಷಣೆಗಾಗಿ ಪೊಲೀಸರ ಮೊರೆ ಹೋಗಿದ್ದಾರೆ. ಆದರೆ, ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಪೊಲೀಸರು ಅಸಹಾಯಕರಾಗಿದ್ದಾರೆ.