ಬಹಿರ್ದೆಸೆಗೆ ಹೋಗಿದ್ದ ಸಂದರ್ಭದಲ್ಲಿ ಯುವಕನ ಮೇಲೆ ಒಂಟಿ ಸಲಗ ದಾಳಿ ನಡೆಸಿ ಸೊಂಡಿಲಿನಿಂದ ಎತ್ತಿ ಬಿಸಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿಯಲ್ಲಿ ನಡೆದಿದೆ.
ಬಹಿರ್ದೆಸೆಗೆ ತೆರಳಿದ್ದ ಯುವಕ ನಾಗೇಶ್ ಮೇಲೆ ಕಾಡಾನೆ ದಾಳಿ ನಡೆಸಿದೆ ಎನ್ನಲಾಗಿದೆ. ಹೀಗಾಗಿ ರಾತ್ರಿಯಿಡೀ ಯುವಕ ಕಾಡಿನಲ್ಲಿಯೇ ಒದ್ದಾಡಿದ್ದಾನೆ.
ಬೆಳಿಗ್ಗೆ ತೆರಳಿದ್ದ ಸ್ಥಳೀಯರು, ಯುವಕನನ್ನು ನೋಡಿ ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆನೆ ದಾಳಿಯಿಂದಾಗಿ ಯುವಕನ ಬಲಗಾಲು ಸ್ವಾಧಈನ ತಪ್ಪಿರುವುದು ಗೊತ್ತಾಗಿದೆ. ಸದ್ಯ ಯುವಕನಿಗೆ ಚಿಕಿತ್ಸೆ ಮುಂದುವರೆಸಲಾಗಿದ್ದು, ಘಟನೆಯ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆನೆಯನ್ನು ಸೆರೆ ಹಿಡುವಂಯೆ ಗ್ರಾಮಸ್ಥರು, ಅರಣ್ಯ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.